ಶ್ರೀನಿವಾಸಪುರ:ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರಗಳು ಕಾಳಜಿ ವಹಿಸಿ ಅಂತಹ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದರೆ ಸಮಾಜದಲ್ಲಿ ಮೂಲಭೂತವಾಗಿ ಕಡೆಗಣಿಸಲ್ಪಟ್ಟಿರುವ ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣ ಹೇಳಿದರು.
ಅವರು ಪಟ್ಟಣದ ನಗರೇಶ್ವರ ದೇವಾಯಲದಲ್ಲಿ ಆಯೋದ್ಯ ನಗರದ ಶಿವಚಾರ್ಯ ನಗರ್ತ ವೈಶ್ಯ ಸಂಘದ ಕೇಂದ್ರ ಸಮಿತಿಗೆ ಶ್ರೀನಿವಾಸಪುರ ಕ್ಷೇತ್ರದಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಬಿ.ಶಿವಕುಮಾರ್ ಅವರನ್ನು ಸನ್ಮಾನಿಸಿ ಮಾತನಾಡಿದರು.
ಸಣ್ಣ ಪುಟ್ಟ ಸಮುದಾಯಗಳ ವೃತ್ತಿಯಾಗಿದ್ದ ಸಣ್ಣ ವ್ಯಾಪಾರ, ವೃತ್ತಿ ಕೌಶಲ್ಯದ ಬದುಕಿಗೆ ಕಾಲದ ಅಣತಿಯ ಜಾಗತಿಕರಣ ಮತ್ತು ಉದಾರಿಕರಣದ ಹೊಡೆತ ಬಿದ್ದಿದೆ ಆ ಸಮುದಾಯಗಳ ಕುಟುಂಬಗಳು ಇನ್ನಿಲ್ಲದ ಸಮಸ್ಯೆಗಳನ್ನು ಅನುಭವಿಸುತ್ತಿವೆ ಇಂತಹ ಸಮುದಾಯಗಳ ಅಭಿವೃದ್ದಿಗೆ ಸರ್ಕಾರಗಳು ವಿಶೇಷ ಕಾಳಜಿ ವಹಿಸಿ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕಾರ್ಯಕ್ರಮಗಳನ್ನು ರೂಪಿಸಬೇಕು ಈ ಬಗ್ಗೆ ಜನಪ್ರತಿನಿಧಿಗಳು ಚುನಾವಣೆ ಸಂದರ್ಭದಲ್ಲಿ ಕೊಡುವಂತ ಅಭಿವೃದ್ಧಿ ಕುರಿತಾದ ವಾಗ್ದಾನಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ನಿರ್ದೇಶಕ ಗೀರಿಶ್, ಮುಖಂಡರಾದ ಕಪಾಲಿಮೋಹನ್,ರಾಜಶೇಖರ್,ಕಪಾಲಿಮಂಜು,ರಾಮಲಿಂಗಪ್ಪ,ಮಂಜುನಾಥ್, ಮಾಡಿ ವೀರಣ್ಣಮಂಜು,ನಗರ್ತ ಮಹಿಳಾ ಸಂಘದ ಮುಖಂಡರಾದ ಅಮುದಾ,ಅನಿತಾ ಆಯೋಧ್ಯ ನಗರದ ನಾಮಧಾರಿ ಸಂಘದ ಸಂಚಾಲಕ ಪಾಳ್ಯಶ್ರೀನಿವಾಸಶೆಟ್ಟಿ,ಪುಟ್ಟರಾಜು,ನಂಬಿಹಳ್ಳಿ ರಮೇಶ್,ಗುರುಮೂರ್ತಿ, ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27