ಶ್ರೀನಿವಾಸಪುರ:ವಿದ್ಯಾರ್ಥಿ ಜೀವನ ಗೋಲ್ಡನ್ ಲೈಫ್ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಸಾಮಜಿಕವಾಗಿ ಜವಬ್ದಾರಿಯುತವಾದಂತ ಹೆಜ್ಜೆ ಇಟ್ಟು ಉತ್ತಮ ಭವಿಷ್ಯತ್ತು ರೂಪಿಸಿಕೊಳ್ಳುವಂತೆ ಮಾಜಿ ಶಾಸಕ ವೆಂಕಟಶಿವಾರೆಡ್ದಿ ಹೇಳಿದರು ಅವರು ತಾಲೂಕಿನ ನೆಲವಂಕಿ ಪಂಚಾಯಿತಿಯ ಗೋರವಿಮಾಕಲಹಳ್ಳಿ ಗ್ರಾಮದಲ್ಲಿ ಬಾಲಕೀಯರ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಎನ್.ಎಸ್.ಎಸ್ ಶಿಭಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶೈಕ್ಷಣಕ ಕಲಿಕೆಗೆ ಸಮಯ ನಿಗದಿಮಾಡಿದಂತೆ ಸಾಮಾಜಿಕ ಕಳಕಳಿಯಿಂದ ತಮ್ಮ ಕೈಲಾದ ಸೇವೆಯನ್ನು ಗೌರವಿತವಾಗಿ ಸಮಾಜದಲ್ಲಿ ಸಲ್ಲಿಸುವಂತೆ ಹೇಳಿದರು.
ದುಬಾರಿಯಾಗುತ್ತಿದೆ ಶಿಕ್ಷಣ ವ್ಯವಸ್ಥೆ
ಭಾರತದಲ್ಲಿ ಶಿಕ್ಷಣ ವ್ಯವಸ್ಥೆ ದುಬಾರಿಯಾಗುತ್ತಿದೆ ಎಂದು ವಿಷಾಧಿಸಿದ ಅವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪೋಷಕರ ಪರಿಸ್ಥಿಯನ್ನು ಹತ್ತಿರದಿಂದ ಬಲ್ಲವನಾಗಿದ್ದು ಬೆಂಗಳೂರ0ತ ಮಹಾನಗರಗಳಲ್ಲಿ ಖಾಸಗಿ ಶಾಲಾ ಕಾಲೇಜಿಗಳಲ್ಲಿ ದುಬಾರಿ ಫೀಜು ಕಟ್ಟಿ ಜೊತೆಗೆ ಹಾಸ್ಟಲ್ ಹಾಗೆ ಪೀಜಿಗಳಿಗೂ ಹಣ ಕಟ್ಟುವುದು ಇಂದಿನ ದಿನಗಳಲ್ಲಿ ದುಬಾರಿ ಎಂದರು.ಇವೆಲ್ಲವನ್ನು ಅರಿತ ನಾನು ಎರಡು ದಶಕಗಳ ಹಿಂದೆಯೇ ನಾನು ಅಧಿಕಾರದಲ್ಲಿದ್ದಾಗ ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಶ್ರೀನಿವಾಸಪುರ ಪಟ್ಟಣದಲ್ಲಿ ಬಹುತೇಕ ಸರ್ಕಾರದ ಪದವಿ,ಪದವಿ ಪೂರ್ವ ಕಾಲೇಜೂಗಳು ಗ್ರಾಮೀಣ ಹೈಸ್ಕೂಲ್ ಗಳ ಸ್ಥಾಪನೆ ಹಾಗೆ ಹಳೇಯ ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದಾಗಿ ಹೇಳಿದರು ಈಗ ಸರ್ಕಾರಗಳು ಹೆಚ್ಚಿನ ಶೈಕ್ಷಣಿಕ ಅನಕೂಲಗಳನ್ನು ಒದಗಿಸುತ್ತಿದೆ ಸರ್ಕಾರಿ ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಓದಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಶೈಕ್ಷಣಿಕವಾಗಿ ಅಭಿವೃದ್ದಿಯಾಗುವಂತೆ ತಿಳಿಸಿದ ಅವರು ಗ್ರಾಮೀಣ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸದಾ ಕಾಲ ಸಹಕಾರ ನೀಡುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ,ಜೆ.ಡಿ.ಎಸ್ ರಾಜ್ಯ ಕಾರ್ಯದರ್ಶಿ ಭಿಮಗುಂಟಪಲ್ಲಿ ಶಿವಾರೆಡ್ಡಿ ಉಪನ್ಯಾಸಕ ಮಂಜುನಾಥರೆಡ್ದಿ,ನೆಲವ0ಕಿ ಪಂಚಾಯಿತಿ ಸದಸ್ಯ ತೂಪಲ್ಲಿ ಮಧು, ಶ್ರೀನಿವಾಸರೆಡ್ದಿ, ಗೋರವಿಮಾಕಲಹಳ್ಳಿ ಶ್ರೀನಿವಾಸ್, ಎ.ಪಿ.ಎಂ.ಸಿ ಮಾಜಿ ಛೇರ್ಮನ್ ಜಯರಾಮರೆಡ್ದಿ,ಉದ್ಯಮಿ ನಾರಯಣಸ್ವಾಮಿ,ಕಾಳಾಚಾರಿ,ತಮ್ಮರೆಡ್ದಿ ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27