ಶ್ರೀನಿವಾಸಪುರ: ಕೌಟಂಬಿಕ ಕಲಹದ ನ್ಯಾಯ ಪಂಚಾಯಿತಿಯಲ್ಲಿ ಮಾತನಾಡಿದ್ದ ವ್ಯಕ್ತಿ ಅನುಮಾನ್ಪದವಾಗಿ ಮೃತಪಟ್ಟಿರುತ್ತಾನೆ ಮೃತನ ಕಡೆಯವರು ಎದುರಾಳಿ ಮಾಡಿದ ಹಿನ್ನಲೆಯಲ್ಲಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ಗೌವವಿಪಲ್ಲಿ ಪೋಲಿಸ್ ಠಾಣೆ ವ್ಯಾಪ್ತಿಯ ಕೋಡಿಪಲ್ಲಿ ಪಂಚಾಯಿತಿಯ ಕರಿಪಲ್ಲಿ ಗ್ರಾಮದಲ್ಲಿ ನಡೆದಿರುತ್ತದೆ.
ಮೃತ ವ್ಯಕ್ತಿಯನ್ನು ವೆಂಕಟರವಣಪ್ಪ (55) ಎಂದು ಗುರುತಿಸಲಾಗಿದೆ ಮೃತ ವ್ಯಕ್ತಿಯ ಮೊಮ್ಮಗಳ ಗಂಡ ಗಣೇಶನೆ ವೆಂಕಟರಮಣಪ್ಪನನ್ನು ಕೊಲೆಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.ಕೊಲೆ ವಿಷಯ ಹೊರಬಿಳುತ್ತಿದ್ದಂತೆ ಮೃತನ ಮನೆಯವರು ಮೊಮ್ಮಗಳ ಗಂಡ ಗಣೇಶನ ಸೋದರ ಮಾವ ಲಚ್ಚನ್ನನ ಮನೆಗೆ ಬೆಂಕಿ ಹಾಕಿದ್ದು ಮನೆ ಹಾಗು ಪೀಠೋಪಕರಣಗಳು ಹಾಗೂ ಬಟ್ಟೆಗಳು ಭಸ್ಮವಾಗಿದೆ
ಮೃತನ ಮೊಮ್ಮಗಳಾದ ಶೋಬಾಳನ್ನು ಚಿಂತಾಮಣಿ ತಾಲೂಕಿನ ಬಟ್ಟಲಪಲ್ಲಿ ಮಾವುಕೆರೆ ಗ್ರಾಮದ ಗಣೇಶನಿಗೆ ಕೊಟ್ಟು ವಿವಾಹ ಮಾಡಲಾಗಿತ್ತು ದಾಂಪತ್ಯ ಜೀವನದ ಕುರಿತಾಗಿ ದಂಪತಿ ನಡುವಿನ ಜಗಳಕ್ಕೆ ಎರಡು ದಿನಗಳ ಹಿಂದಿನ ರಾತ್ರಿ ಗ್ರಾಮದಲ್ಲಿ
ನ್ಯಾಯ ಪಂಚಾಯತಿ ಮಾಡಲಾಗಿದೆ ಈ ಸಂದರ್ಭದಲ್ಲಿ ಎರಡು ಕುಟುಂಬದವರ ನಡುವೆ ಮಾತಿಗೆ ಚಕಮಕಿ ನಡೆದಿರುತ್ತದೆ ಇದು ಗಲಾಟೆಗೆ ತಿರುಗಿದೆ ಇದರಿಂದ ಮೊಮ್ಮಗಳ ಗಂಡ ಗಣೇಶ್ ಹಾಗೂ ಸಹಚರರು ವೆಂಕಟರಣಪ್ಪನನ್ನು ತಳ್ಳಾಡಿದ್ದು ಇದರಿಂದ ಗಾಯಗೊಂಡ ವೆಂಕಟರಮಣಪ್ಪ ಮೃತರಾಗಿದ್ದಾರೆ ಎನ್ನಲಾಗಿದೆ ಇದರಿಂದ ರೊಚ್ಚಿಗೆದ್ದ ಮೃತ ವ್ಯಕ್ತಿಯ ಕಡೆಯವರು ಗಣೇಶನ ಸೋದರ ಮಾವ ಲಚ್ಚನ್ನನ ಮನೆಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಪೋಲಿಸರು ಹೇಳುತ್ತಾರೆ.
ಘಟನಾ ಸ್ಥಳಕ್ಕೆ ಕೋಲಾರ ಅಡಿಷನಲ್ ಎಸ್ ಪಿ ಸಚಿನ್,ಮುಳಬಾಗಿಲು ಡಿ.ವೈ.ಎಸ್.ಪಿ ಜಯಶಂಕರ್,ಗೌವನಪಲ್ಲಿ ವೃತ್ತ ನೀರಿಕ್ಷಕ ಜಯಾನಂದ ಭೇಟಿ ನೀಡಿ ಪರಿಶೀಲನೆ ಮಾಡಿದ್ದು,ಮುನ್ನೆಚ್ಚರಿಕೆಯಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



