ಶ್ರೀನಿವಾಸಪುರ:ಕೆಸಿ ವ್ಯಾಲಿ ನೀರನ್ನು ಕೋಲಾರ ಜಿಲ್ಲೆಗೆ ಕೊಡಲೆ ಬೇಕು ಎಂದು ಇದ್ದರೆ ಪರಿಣಾಮಕಾರಿಯಾಗಿ ಮೂರನೆ ಹಂತದ ಶುದ್ಧೀಕರಣ ಮಾಡಿ ಹರಿಸುವ ಮೂಲಕ ಈ ಭಾಗದ ಜನರಿಗೆ ಅಗಿರುವಂತ ಅನ್ಯಾಯವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸರಿಪಡಿಲಾಗುವುದು ಸಾದ್ಯವಾಗದಿದ್ದರೆ ಕೆಸಿ ವ್ಯಾಲಿ ಯೋಜನೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು ಅವರು ತಾಲೂಕಿನ ನಕ್ಕಲಗಡ್ದ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಿದ್ದು ಗ್ರಾಮಕ್ಕೆ ಹೋದಾಗ ತಡರಾತ್ರಿ 2 ಗಂಟೆಯಾಗಿದ್ದು ಮತ್ತು ಮಳೆ ಹಿನ್ನಲೆಯಲ್ಲಿ ಮರುದಿನ ಬುಧವಾರ ಮುಂಜಾನೆ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಸಿ ವ್ಯಾಸಿ ಯೋಜನೆಯ ಎರಡನೆ ಹಂತದ ನೀರು ಶುದ್ಧೀಕರಣದ ಯಂತ್ರಗಳು ಕೆಟ್ಟು ನಿಂತಿದ್ದು ಬೆಂಗಳೂರಿನಿಂದ ನೀರು ನೇರವಾಗಿ ಹರಿದು ಬರುತ್ತಿದೆ ಬಿಜೆಪಿ ವಿರುದ್ದ 40 ಪರ್ಸಂಟೆಜ್ ಆರೋಪ ಮಾಡುವವರು ಈ ಯೋಜನೆಯಲ್ಲಿ ಎನೆಲ್ಲಾ ಅಕ್ರಮಗಳು ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಮಾರ್ಮಿಕವಾಗಿ ಹೇಳಿದರು.
ಬಿಜೆಪಿ ಸರ್ಕಾರಗಳ ವಿರುದ್ದ ತೀವ್ರವಾಗಿ ವಾಗ್ದಾಳಿ
ನೆಲ ಜಲ ಸಂರಕ್ಷಣೆಯಲ್ಲಿ ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಸರ್ಕಾರಗಳ ವಿರುದ್ದ ತೀವ್ರವಾಗಿ ವಾಗ್ದಾಳಿ ನಡೆಸಿದರು ರಾಜ್ಯದ ನೆಲ ಜಲ ಸಂರಕ್ಷಣೆಯಲ್ಲಿ ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ
ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಸಾಧ್ಯವಿಲ್ಲ ಎಂದ ಅವರು ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗುತ್ತಿದೆ ಎಂದರು.
ಯಾರದೋ ಅನಕೂಲಕ್ಕಾಗಿ ಕೋಲಾರಕ್ಕೆ ಯಾರನ್ನೆ ಕರೆತಂದು ನಿಲ್ಲಿಸಿದರು ಕೋಲಾರ ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ನಮ್ಮ ಪಕ್ಷ ಬಲಿಷ್ಠವಾಗಿದೆ ಜನತೆ ಜೆಡಿಎಸ್ ಗೆಲ್ಲಿಸಬೇಕು ಎಂಬ ಹುಮ್ಮಸ್ಸಿನಲ್ಲಿದ್ದಾರೆ, ಕೋಲಾರ-ಚಿಕ್ಕಬಳ್ಳಾಪುರ ಎರಡು ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ 10 ರಿಂದ 15 ಕ್ಷೇತ್ರಗಳಲ್ಲಿ ಮಹಿಳೆಯರು ಸ್ಪರ್ದಿಸಲು ಅವಕಾಶ ಕಲ್ಪಿಸುವುದಾಗಿ ಹೇಳಿದರು.
ಇವರೊಂದಿಗೆ ಚಿಂತಾಮಣಿ ಶಾಸಕ ಕೃಷ್ಣಾರೆಡ್ದಿ,ಮಾಜಿ ಶಾಸಕ ವೆಂಕಟಶಿವಾರೆಡ್ದಿ,ವಿಧಾನಪರಿಷತ್ ಸದಸ್ಯ ಇಂಚರಗೋವಿಂದರಾಜು,ಮಾಜಿ ಸದಸ್ಯ ಪಲ್ಲಿಚೌಡರೆಡ್ಡಿ,ಸಮೃದ್ದಿ ಮಂಜುನಾಥ್,ಭಿಮಗುಂಟಪಲ್ಲಿ ಶಿವಾರೆಡ್ದಿ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



