ಶ್ರೀನಿವಾಸಪುರ: ಆಂಧ್ರದ ಗಡಿಬಾಗದಲ್ಲಿದ್ದು ಜನರ ಬದುಕಿನಲ್ಲಿ ಆಂಧ್ರದ ಸಂಸೃತಿ ಅನಾವರಣವಾಗಿದ್ದರು ತಾಲೂಕಿನ ಜನತೆ ಕನ್ನಡ ಭಾಷೆ ಮೇಲಿನ ಪ್ರಿತಿ ಅಭಿಮಾನ ಕಡಿಮೆಯಾಗಿಲ್ಲ ಕನ್ನಡವನ್ನು ಆಡಳಿತಾತ್ಮಕವಾಗಿ ಇನ್ನೂ ಹೆಚ್ಚು ಬಳಸುವ ಮೂಲಕ ಕನ್ನಡ ಭಾಷೆಗೆ ಹೆಚ್ಚು ಮಹತ್ವನೀಡಬೇಕೆಂದು ತಹಶೀಲ್ದಾರ್ ಶೀರಿನ್ತಾಜ್ ಮನವಿ ಮಾಡಿದರು.
ಅವರು ತಮ್ಮ ಕಚೇರಿ ಸಂಬಾಂಗಣದಲ್ಲಿ ತಾಲೂಕಿನ ಯಲ್ದೂರಿನಲ್ಲಿ ನಡೆಯಲಿರುವ ಶ್ರೀನಿವಾಸಪುರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆಮಾಡಿ ಮಾತನಾಡಿದರು ಈ ತಿಂಗಳ 9 ರಂದು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲೂಕಿನ 12 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಡೆಯಲಿದೆ ಎಂದರು.ಭಾಷೆಯ ಉಳಿವಿಗಾಗಿ ಸಾಹಿತ್ಯ ಪರಿಷತ್ ಕನ್ನಡಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಮಾನಸದಲ್ಲಿ ಸಾಗುತ್ತಿರುವುದು ಹೆಮ್ಮೆಯ ವಿಷಯವಾಗಿದ್ದು 12 ನೇ ಸಮ್ಮೇಳನವೂ ವೈಭವೂರಿತವಾಗಿ ಆಚರಿಸಲು ಮುಂದಾಗಿದ್ದು ಎಲ್ಲರ ಸಹಕಾರ ಅಗತ್ಯವಾಗಿ ಬೇಕು ಎಂದರು.
ಕಸಾಪ ಜಿಲ್ಲಾಧ್ಯಕ್ಷ ಗೋಪಾಲಗೌಡ ಮಾತನಾಡಿ ಡಿಸಂಬರ್ 9ರಂದು ತಾಲೂಕಿನ ಯಲ್ದೂರಿನ ನ್ಯಾಷನಲ್ ಪ್ರೌಡಶಾಲೆ ಆವರಣದಲ್ಲಿ 12 ನೇ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷರಾಗಿ ಕವಿಗಳು ಹಾಗು ಇದೆ ಯಲ್ದೂರು ಹೋಬಳಿ ನಿವಾಸಿಗಳಾದ ಪಾತಮುತಕಪಲ್ಲಿ ಚಲಪತಿಗೌಡ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಇದು ತಾಲ್ಲೂಕಿನ ಸಮಸ್ತ ಕನ್ನಡ ಮನಸ್ಸುಗಳು ಹೆಮ್ಮೆ ಪಡುವಂತ ವಿಚಾರ ಈ ಸಮ್ಮೇಳನ ಯಶಸ್ಸಿಗೆ ತಾಲೂಕಿನ ಕನ್ನಡಪರ,ಪ್ರಗತಿಪರ,ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಹಾಗು ಸಮಾಜಗಳ ಮುಖಂಡರು ಹೆಚ್ಚಿನ ಸಹಕಾರ ನೀಡುವುದರೊಂದಿಗೆ ದೊಡ್ದ ಸಂಖ್ಯೆಯಲ್ಲಿ ಪಾಲ್ಗೋಂಡು ಕನ್ನಡ ನುಡಿ ಹಬ್ಬವನ್ನ ಯಶಸ್ವಿಗೋಳಿಸೋಣ ಎಂದರು.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಮಾಯಾಬಾಲಚಂದ್ರ ,ಕಸಾಪ ತಾಲೂಕು ಅಧ್ಯಕ್ಷೆ ಉಪನ್ಯಾಸಕಿ ಮಂಜುಳ, ಕಾರ್ಯದರ್ಶಿ ಬೈರೇಗೌಡ, ಶ್ರೀರಾಮೇಗೌಡ, ಖಜಾಂಚಿ ಮುರಳಿ,ಪ್ರತಿನಿಧಿ ಜಿ.ವಿ.ಚಂದ್ರಪ್ಪ, ಜಿಲ್ಲಾ ಸಂಚಾಲಕ ರವಿಕುಮಾರ್,ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ನಾಗರಾಜ್, ಸದಸ್ಯರಾದ ವೆಂಕಟರಮಣ, ಅನಿಲ್ಕುಮಾರ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



