ಶ್ರೀನಿವಾಸಪುರ:ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಮಾಂಡೂಸ್ ಚಂಡಮಾರುತದ ಚಳಿ-ಮಳೆಯಲ್ಲಿ ನೆಂದು ಪರೆದಾಡಿದ ವಿದ್ಯಾರ್ಥಿಗಳು!ಇಂದು ವಾರಾಂತ್ಯ ಶನಿವಾರ ಮಾರ್ನಿಂಗ್ ಸ್ಕೂಲ್ ವಿದ್ಯಾರ್ಥಿಗಳ ಕಥೆ ಇದು,ಸುರಿಯುವ ಮಳೆಯಲ್ಲೆ ಶಾಲೆಗೆ ಬಂದ ಮಕ್ಕಳು ಮಳೆಯಲ್ಲಿ ನೆನೆದು ಮುದ್ದೆಯಾದರೂ,ಇದು ಪಟ್ಟಣ ಶಾಲೆಗಳ ಪರಿಸ್ಥಿತಿಯಾದರೆ ಗ್ರಾಮೀಣ ಭಾಗದ ಕೆಲ ಶಾಲೆಯ ಶಿಕ್ಷಕರು ಮನೆಯಲ್ಲೆ ಕುಳಿತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು ಸದಸ್ಯರನ್ನು ಫೊನ್ ಮೂಲಕ ಸಂಪರ್ಕಿಸಿ ಅವರ ಒಪ್ಪಿಗೆ ಪಡೆದು ಶಾಲೆಗಳಿಗೆ ರಜೆ ಘೋಷಿಸಿದರೆ, ಇನ್ನೂಳಿದಂತೆ ಶಿಕ್ಷಕರು ಮಳೆ-ಗಾಳಿ ಲೆಕ್ಕಿಸದೆ ಶಾಲೆಗೆ ಹೋಗಿ ಮಕ್ಕಳು ಬಾರದ ಹಿನ್ನಲೆಯಲ್ಲಿ ಊರಿನ ಮುಖಂಡರ,ಶಾಲಾಭಿವೃದ್ಧಿ ಸಮಿತಿಯವರ ಅಭಿಪ್ರಾಯ ಪಡೆದು ಶಾಲೆಗೆ ರಜೆ ಘೋಷಿಸಿ ಬಂದಿರುತ್ತಾರೆ.
ಭಾರತೀಯ ಹವಾಮಾನ ಇಲಾಖೆ (IMD) ಸೂಚಿಸಿರುವಂತೆ ಮಾಂಡೂಸ್ ಚಂಡಮಾರುತ ಎಫೆಕ್ಟ್ ಡಿಸೆಂಬರ್ 14 ರವರೆಗೆ ಭಾರೀ ಮಳೆಯಾಗಲಿದ್ದು ಕೋಲಾರ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಶನಿವಾರ-ಭಾನುವಾರ ಯಲ್ಲೋ ಅಲರ್ಟ್ ಘೋಷಣೆಯಾಗಿದೆ ಇಷ್ಟೆಲ್ಲ ಮುನ್ಸೂಚನೆ ಇದ್ದರು ಕೋಲಾರ ಜಿಲ್ಲಾಡಳಿತ ಹಾಗು ಶಿಕ್ಷಣ ಇಲಾಖೆ ಅಧಿಕಾರಿಗಳು ಯಾವುದೆ ಮುಂಜಾಗ್ರತೆ ವಹಿಸಿ ಕೋಲಾರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸದೆ ನಿರ್ಲಕ್ಷ್ಯತನ ತೋರಿದೆ ಎಂದು ಪೋಷಕರು ಆಕ್ರೊಶ ವ್ಯಕ್ತಪಡಿಸುತ್ತಾರೆ.
ಕೋಲಾರ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಜವಾಬ್ದಾರಿ ರಹಿತ ವರ್ತನೆಯ ಪರಿಣಾಮ ಮಳೆ ಲೆಕ್ಕಿಸದೆ ಶಾಲ ಮಕ್ಕಳು ಶಾಲೆಗೆ ಬಂದು ಚಳಿ ಗಾಳಿಗೆ ತತ್ತರಿಸಿ ಮಳೆಯಲ್ಲಿ ನೆನೆದು ವಿದ್ಯಾರ್ಥಿಗಳು ಮನೆಗೆ ವಾಪಸ್ಸಾಗಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27