ನ್ಯೂಜ್ ಡೆಸ್ಕ್: ತೆಲಂಗಾಣದ ಉದ್ಯಮಿಯೊಬ್ಬರು ಹೊಸದಾಗಿ ಹೆಲಿಕಾಪ್ಟರ್ ಖರಿದಿಸಿ ಅದಕ್ಕೆ ಪೂಜೆ ಮಾಡಿಸಲು ಯಾದಾದ್ರಿಯ ಬೆಟ್ಟದ ಮೇಲಿನ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತಂದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಸಾಮಾನ್ಯವಾಗಿ ಹೊಸದಾಗಿ ಖರೀದಿಸಿದ ದ್ವಿಚಕ್ರವಾಹನಕ್ಕೊ, ನಾಲ್ಕು ಚಕ್ರದ ಕಾರು ಟೆಂಪೊ ವಾಹನಗಳನ್ನು ದೇವಸ್ಥಾನಕ್ಕೆ ತಂದು ಪೂಜೆ ಸಲ್ಲಿಸುವುದು ಮಾಮೂಲು, ಆದರೆ ತೆಲಂಗಾಣ ರಾಜ್ಯದ ಕರಿಂನಗರ ಪ್ರತಿಮಾ ಮೆಡಿಕಲ್ ಕಾಲೇಜು ಮಾಲಿಕ ಮತ್ತು ತೆಲಂಗಾಣದ ಪ್ರಭಾವಿ ಉದ್ಯಮಿ ಪ್ರತಿಮಾ ಗ್ರೂಪ್ಸ್ ಮಾಲೀಕ ಬೋಯನಪಲ್ಲಿ ಶ್ರೀನಿವಾಸ್ ರಾವ್ ಏರ್ಬಸ್ ಎಸಿಹೆಚ್ 135 ಹೆಲಿಕಾಪ್ಟರ್ ಅನ್ನು 5.7 ಮಿಲಿಯನ್ ಯುಎಸ್ ಡಾಲರ್ ಕೊಟ್ಟು ಖರೀದಿಸಿದ್ದಾರೆ ಅದಕ್ಕೆ ಪೂಜೆ ಸಲ್ಲಿಸಲು ತಮ್ಮ ಇಷ್ಟ ದೈವ ಯಾದಾದ್ರಿಯ ಬೆಟ್ಟದ ಮೇಲಿನ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತಂದು ಅದಕ್ಕೆ ವಾಹನ ಪೂಜೆ ಮಾಡಿಸಿದ್ದಾರೆ.!
ಕುಟುಂಬಸಮೇತವಾಗಿ ಶ್ರೀನಿವಾಸ್ ರಾವ್ ಹೆಲಿಕಾಪ್ಟರ್ನಲ್ಲಿಯೇ ದೇವಸ್ಥಾನಕ್ಕೆ ಬಂದು ಮೂವರು ಅರ್ಚಕರಿಂದ ವಿಶೇಷ ಪೂಜೆ ಮಾಡಿಸಿದ್ದಾರೆ.
ಉದ್ಯಮಿ ಶ್ರೀನಿವಾಸ್ ರಾವ್ ತೆಲಂಗಾಣದ ಪ್ರಭಾವಿ ಬಿಜೆಪಿ ಮುಖಂಡ ಮಾಜಿ ಕೇಂದ್ರ ಸಚಿವ ಹಾಗು ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರ ಸಂಬಂಧಿಯಾಗಿದ್ದು,ಪೂಜಾ ಕಾರ್ಯಕ್ರಮದಲ್ಲಿ ವಿದ್ಯಾಸಾಗರ್ ಅವರೂ ಉಪಸ್ಥಿತರಿದ್ದರು. ಪ್ರತಿಮಾ ಗ್ರೂಪ್ಸ್ ಇನ್ಫ್ರಾಸ್ಟ್ರಕ್ಚರ್, ಇಂಧನ, ಟೆಲಿಕಾಂ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದು, ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳನ್ನೂ ಹೊಂದಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



