ನ್ಯೂಜ್ ಡೆಸ್ಕ್: ತೆಲಂಗಾಣದ ಉದ್ಯಮಿಯೊಬ್ಬರು ಹೊಸದಾಗಿ ಹೆಲಿಕಾಪ್ಟರ್ ಖರಿದಿಸಿ ಅದಕ್ಕೆ ಪೂಜೆ ಮಾಡಿಸಲು ಯಾದಾದ್ರಿಯ ಬೆಟ್ಟದ ಮೇಲಿನ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತಂದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಸಾಮಾನ್ಯವಾಗಿ ಹೊಸದಾಗಿ ಖರೀದಿಸಿದ ದ್ವಿಚಕ್ರವಾಹನಕ್ಕೊ, ನಾಲ್ಕು ಚಕ್ರದ ಕಾರು ಟೆಂಪೊ ವಾಹನಗಳನ್ನು ದೇವಸ್ಥಾನಕ್ಕೆ ತಂದು ಪೂಜೆ ಸಲ್ಲಿಸುವುದು ಮಾಮೂಲು, ಆದರೆ ತೆಲಂಗಾಣ ರಾಜ್ಯದ ಕರಿಂನಗರ ಪ್ರತಿಮಾ ಮೆಡಿಕಲ್ ಕಾಲೇಜು ಮಾಲಿಕ ಮತ್ತು ತೆಲಂಗಾಣದ ಪ್ರಭಾವಿ ಉದ್ಯಮಿ ಪ್ರತಿಮಾ ಗ್ರೂಪ್ಸ್ ಮಾಲೀಕ ಬೋಯನಪಲ್ಲಿ ಶ್ರೀನಿವಾಸ್ ರಾವ್ ಏರ್ಬಸ್ ಎಸಿಹೆಚ್ 135 ಹೆಲಿಕಾಪ್ಟರ್ ಅನ್ನು 5.7 ಮಿಲಿಯನ್ ಯುಎಸ್ ಡಾಲರ್ ಕೊಟ್ಟು ಖರೀದಿಸಿದ್ದಾರೆ ಅದಕ್ಕೆ ಪೂಜೆ ಸಲ್ಲಿಸಲು ತಮ್ಮ ಇಷ್ಟ ದೈವ ಯಾದಾದ್ರಿಯ ಬೆಟ್ಟದ ಮೇಲಿನ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತಂದು ಅದಕ್ಕೆ ವಾಹನ ಪೂಜೆ ಮಾಡಿಸಿದ್ದಾರೆ.!
ಕುಟುಂಬಸಮೇತವಾಗಿ ಶ್ರೀನಿವಾಸ್ ರಾವ್ ಹೆಲಿಕಾಪ್ಟರ್ನಲ್ಲಿಯೇ ದೇವಸ್ಥಾನಕ್ಕೆ ಬಂದು ಮೂವರು ಅರ್ಚಕರಿಂದ ವಿಶೇಷ ಪೂಜೆ ಮಾಡಿಸಿದ್ದಾರೆ.
ಉದ್ಯಮಿ ಶ್ರೀನಿವಾಸ್ ರಾವ್ ತೆಲಂಗಾಣದ ಪ್ರಭಾವಿ ಬಿಜೆಪಿ ಮುಖಂಡ ಮಾಜಿ ಕೇಂದ್ರ ಸಚಿವ ಹಾಗು ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರ ಸಂಬಂಧಿಯಾಗಿದ್ದು,ಪೂಜಾ ಕಾರ್ಯಕ್ರಮದಲ್ಲಿ ವಿದ್ಯಾಸಾಗರ್ ಅವರೂ ಉಪಸ್ಥಿತರಿದ್ದರು. ಪ್ರತಿಮಾ ಗ್ರೂಪ್ಸ್ ಇನ್ಫ್ರಾಸ್ಟ್ರಕ್ಚರ್, ಇಂಧನ, ಟೆಲಿಕಾಂ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದು, ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳನ್ನೂ ಹೊಂದಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



