ಶ್ರೀನಿವಾಸಪುರ:ಕರ್ನಾಟಕದ ರೈತರ,ಗ್ರಾಮೀಣ ಜನರ ಹಾಗು ಸಾಮಾನ್ಯ ಜನರ ಬವಣೆ ನೀಗಿಸಿ ಅವರು ಅಭಿವೃದ್ಧಿಯಾಗಲು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕಿದೆ ಎಂದು ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ ಹೇಳಿದರು ಅವರು ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತರು ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಮಾತನಾಡಿ ರಾಷ್ಟ್ರೀಯ ಪಕ್ಷಗಳ ನಿರ್ಲಕ್ಷ್ಯ ಅಡಳಿತದಿಂದ ರಾಜ್ಯ ವಿವಿಧ ಸಮಸ್ಯೆಗಳಿಂದ ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಬಿದ್ದಿದೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣ ಮಾತನಾಡಿ ಜನಸಾಮಾನ್ಯರ ಬದುಕಿನಲ್ಲಿ ಆಶಾಕಿರಣವಾಗಿರುವ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿಯಾದರೆ ರಾಜ್ಯ ಅಭಿವೃದ್ಧಿ ಪಥದತ್ತ ಸಾಗುತ್ತದೆ ಎಂದರು.
ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಇಂದಿರಾಭವನ್ ವೃತ್ತದಲ್ಲಿ ಪಟಾಕಿ ಸಿಡಿಸಿ ಕೆಕ್ ಕತ್ತರಿಸಿ ಸಂಭ್ರಮಿಸಿದರು.
ಈ ಸಂದರ್ಬದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಶ್ರೀನಿವಾಸಪ್ಪ,ಅಂಬೇಡ್ಕರ್ ಪಾಳ್ಯ ರವಿ,ಕಾರ್ ಬಾಬು, ಮಂಜುನಾಥಗೌಡ,ನಾಗದೇನಹಳ್ಳಿ ಚೌಡರೆಡ್ಡಿ,ಜಗದೀಶ್,ನಿವೃತ್ತ ಶಿಕ್ಷಕ ವೆಂಕಟರೆಡ್ಡಿ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



