ಶ್ರೀನಿವಾಸಪುರ: ತಾಲೂಕಿನ ರಾಯಲ್ಪಾಡು ಹೋಬಳಿಯ ಯಂಡ್ರಕಾಯಿಲಗುಂಟ ಗ್ರಾಮದ ದೇವಾಲಯಕ್ಕೆ ಸಮಾಜಸೇವಕ ಗೂಂಜೂರುಶ್ರೀನಿವಾಸರೆಡ್ದಿ ಧ್ವನಿವರ್ಧಕ ಹಾಗು ಇತರೆ ಪರಿಕರಗಳು ಕೊಡುಗೆಯಾಗಿ ನೀಡಿದರು.
ಈ ಸಂದರ್ಬದಲ್ಲಿ ಮಾತನಾಡಿದ ಶ್ರೀನಿವಾಸರೆಡ್ದಿ ಗ್ರಾಮದ ಯುವಸಮುದಾಯ ನಮ್ಮ ಬಣಕ್ಕೆ ಸೇರ್ಪಡೆಯಾಗಿದ್ದು ಅವರು ಹಣ ಸೇರಿದಂತೆ ಇನ್ನಿತರೆ ಯಾವುದೆ ವೈಯುಕ್ತಿಕ ಆಮೀಷಕ್ಕೆ ಒಳಗಾಗದೆ ದೇವಾಲಯದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದರು ಅದರಂತೆ ಆರಂಭಿಕವಾಗಿ ಧ್ವನಿವರ್ಧಕ ಸೇರಿದಂತೆ ಇನ್ನಿತರೆ ಪರಿಕರಗಳನ್ನು ಕೊಡುಗೆಯಾಗಿ ಕೊಡುತ್ತಿದ್ದೇವೆ ಮುಂದಿನ ದಿನಗಳಲ್ಲಿ ಗ್ರಾಮದ ಅಭಿವೃದ್ಧಿಗೆ ಸಂಪೂರ್ಣವಾದ ಸಹಕಾರ ನೀಡುವುದಾಗಿ ಹೇಳಿದರು.
ಇದೇ ಸಂದರ್ಬದಲ್ಲಿ ಹೋಳೂರು ಹೋಬಳಿಯ ಮಾರೇನಹಳ್ಳಿ ಗ್ರಾಮದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯಕ್ಕೆ ಪೈಂಟ್ ಬಳಿಯಲು ಧನಸಹಾಯ ಮಾಡಿರುತ್ತಾರೆ.
ಈ ಕಾರ್ಯಕ್ರಮದಲ್ಲಿ ಜಿ.ಎಸ್.ಆರ್ ಬಣದ ಮುಖಂಡರಾದ ಎಪಿಎಂಸಿ ಮಾಜಿ ಅಧ್ಯಕ್ಷ ಪೆದ್ದರೆಡ್ಡಿರಾಜೇಂದ್ರಪ್ರಸಾದ್,ಪಠಾಣ್ ಷಫಿ,ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅತ್ತಿಕುಂಟೆರಾಜಶೇಖರೆಡ್ದಿ,ಯಂಡ್ರಕಾಯಿಲಗುಂಟ ಗ್ರಾಮದ ವೆಂಕಟರಮಣ,ನರಸಿಂಹಯ್ಯ,ರವಣಪ್ಪ,ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



