ಶ್ರೀನಿವಾಸಪುರ:ಸಾರ್ವಜನಿಕ ಜೀವನದಲ್ಲಿ ಇರುವಂತ ವ್ಯಕ್ತಿಗಳ ಹುಟ್ಟುಹಬ್ಬದ ಕಾರ್ಯಕ್ರಮಗಳು ಸಾರ್ವಜನಿಕವಾಗಿ ಆಚರಿಸಿಕೊಂಡಾಗ ಅವರ ಬದುಕಿನಲ್ಲಿ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ ಹೇಳಿದರು ಅವರು ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣರವರ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು ಮತ್ತು ರಾಜಣ್ಣ ಅಭಿಮಾನಿಗಳು ತಾಲೂಕಿನ ಅರಿಕುಂಟೆ ವೃದ್ಧಾಶ್ರಮದ ಹಿರಿಯ ನಾಗರಿಕರಿಗೆ ಸ್ವೇಟರ್ ಹಾಗು ಇತರೆ ಪರಿಕರಗಳನ್ನು ವಿತರಿಸಿ ಮಾತನಾಡಿ ಹುಟ್ಟುಹಬ್ಬದ ಆಚರಣೆ ಅರ್ಥ ಪೂರ್ಣವಾಗಿದ್ದಾಗ ಅದಕ್ಕೆ ಗೌರವ ಹೆಚ್ಚಾಗುತ್ತದೆ ಎಂದರು.
ಇಂದಿರಾಭವನ್ ರಾಜಣ್ಣ ಮಾತನಾಡಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಅಭಿಮಾನದಿಂದ ಆಯೋಜಿಸುವ ಕಾರ್ಯಕ್ರಮಗಳಿಗೆ ಬೆಲೆ ಕಟ್ಟಲಾಗದ್ದು ಅವರಿಗೆ ಚಿರಋಣಿ ಎಂದರು ಇದೇ ಸಂದರ್ಭದಲ್ಲಿ ಇಂದಿರಾಭವನ್ ವೃತ್ತದಲ್ಲಿ ಕೆಕ್ ಕತ್ತರಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಿಸಿದರು.
ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಸದಸ್ಯ ಮಂಜುನಾಥಗೌಡ,ಜಗದೀಶ್,ಕಾರ್ ಬಾಬು,ಉದ್ಯಮಿ ಅಂಬೇಡ್ಕರ್ ಪಾಳ್ಯ ರವಿ, ಗೋರವಿಮಾಕಲಹಳ್ಳಿಶ್ರೀನಿವಾಸ್,ಗುರುಮೂರ್ತಿ,ಅವಲಕುಪ್ಪರಾಮಚಂದ್ರ,ಜಗನ್,ಬಿ.ಎಲ್.ದುರ್ಗ,ಪ್ರೇಮ್,ಪೂಲುಶಿವಾರೆಡ್ಡಿ ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27