ಶ್ರೀನಿವಾಸಪುರ: ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷರಾಗಿ ಹಿರಿಯ ವಕೀಲ ಜಯರಾಮೇಗೌಡ ಕಾರ್ಯದರ್ಶಿಯಾಗಿ ಪಿ.ಸಿ.ನಾರಯಣಸ್ವಾಮಿ ಆಯ್ಕೆಯಾಗಿರುತ್ತಾರೆ ಇಂದು ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆ ನಡೆದು ಅಧ್ಯಕ್ಷ ಕಾರ್ಯದರ್ಶಿ ಹಾಗು ವಿವಿದ ಸ್ಥಾನಗಳಿಗೆ ಆಯ್ಕೆಯಾದರು.
ಶ್ರೀನಿವಾಸಪುರ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಜಯರಾಮೇಗೌಡ,ಪ್ರಧಾನ ಕಾರ್ಯದರ್ಶಿ ಪಿ ಸಿ ನಾರಾಯಣಸ್ವಾಮಿ ಆಯ್ಕೆಯಾಗಿದ್ದು ಉಪಾಧ್ಯಕ್ಷರಾಗಿ ಟಿ ವಿ ನಾರಾಯಣಸ್ವಾಮಿ,ಖಜಾಂಚಿಯಾಗಿ ಜಿ.ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಜಯರಾಮೇಗೌಡ ಮಾತನಾಡಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ 5 ನೇ ಬಾರಿಗೆ ಆಯ್ಕೆಯಾಗಿರುತ್ತೇನೆ,ವಕೀಲರ ಸಮಸ್ಯೆಗಳಿಗೆ ಹಿರಿಯ ಹಾಗೂ ಕಿರಿಯರ ಸಲಹೆ ಸೂಚನೆಗಳನ್ನು ಪಡೆದು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತೇನೆ ಸಂಘವನ್ನು ಇನ್ನಷ್ಟು ಉತ್ತಮವಾಗಿ ಅಭಿವೃದ್ಧಿ ಮಾಡುವುದಾಗಿ ಹೇಳಿದ ಅವರು ನನ್ನ ಆಯ್ಕೆಗೆ ಸಹಕಾರ ನೀಡಿದ ವಕೀಲರ ಸಂಘದ ಸದಸ್ಯರಿಗೆ ಚಿರಋಣಿಯಾಗಿ ಇರುತ್ತೇನೆ ಎಂದರು.ಈ ಸಂದರ್ಭದಲ್ಲಿ ಹಿರಿಯ ವಕೀಲ ಕೊಡಿಚೆರವುನಾರಯಣಸ್ವಾಮಿ,ಶೆಟ್ಟಿಶ್ರೀನಿವಾಸ್,ಕೆ.ಶ್ರೀನಿವಾಸನ್ ಚಲಪತಿ,ಸೌಭಾಗ್ಯವತಿ,ಶ್ರೀನಿವಾಸಗೌಡ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



