ಶ್ರೀನಿವಾಸಪುರ:ತಾಲೂಕಿನ ಅರಕೇರಿಯ ಐತಿಹಾಸಿಕ ಪುಣ್ಯಕ್ಷೇತ್ರ ಶ್ರೀ ನಾಗನಾಥೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರತಿವರ್ಷದಂತೆ ರಥೋತ್ಸವ ಸಾಂಪ್ರದಾಯಕವಾಗಿ ನಡೆಯಿತು.
ತಾಲೂಕಿನ ಅರಕೇರಿ ಶ್ರೀ ನಾಗನಾಥೇಶ್ವರ ದೇವಾಲಯದಲ್ಲಿ ಎರಡು ದಿನಗಳ ಜಾತ್ರಾ ಮಹೋತ್ಸವ ಇಂದು ಶನಿವಾರ ಆರಂಭವಾಯಿತು ಇಂದು ಬೆಳೆಗ್ಗೆ ವಿಶೇಷ ಹೋಮ ಹವನ ಹಾಗು ಗಿರಿಜಾ ಕಲ್ಯಾಣ ನಡೆಯಿತು,ಮಧ್ಯಾಹ್ನ ಶ್ರೀ ನಾಗನಾಥೇಶ್ವರ ಬ್ರಹ್ಮರಥೋತ್ಸವ ಸಂಪ್ರದಾಯದಂತೆ ದೇವಾಲಯದ ಧರ್ಮಾಧಿಕಾರಿ ರಮೇಶಬಾಬು ನೇತೃತ್ವದಲ್ಲಿ ಸಾವಿರಾರು ಭಕ್ತರು ರಥ ಎಳೆದು ಪುನಿತರಾದರು, ವಿಶೇಷ ಪೂಜಾ ಕಾರ್ಯಗಳು ಹಾಗು ಉತ್ಸವಗಳಲ್ಲಿ ಸಾವಿರಾರು ಭಕ್ತರು ಪಾಲ್ಗೋಂಡು ಭಕ್ತಿಭಾವ ಮೆರೆದರು.
ರಥೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ರಾಜಣ್ಣ, ಮುಖಂಡ ಗುಂಜೂರುಶ್ರೀನಿವಾಸರೆಡ್ಡಿ,ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ,ಪುರಸಭೆ ಸದಸ್ಯ ಭಾಸ್ಕರ್,ಮಾಜಿ ಸದಸ್ಯ ಸಿಮೆಂಟ್ ರಮೇಶ್,ಆದ್ಯಾತ್ಮಿಕ ಚಿಂತಕ ಬಾಬಾಅಂಕಲ್ ನಾಗರಾಜ್,ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕಲ್ಲೂರುಮಂಜು,ಅತ್ತಿಕುಂಟೆ ರಾಜಶೇಖರೆಡ್ದಿ, ಮುಖಂಡರಾದ,ಲಕ್ಷ್ಮೀಸಾಗರ ಆಶೋಕ್,ಡೈರಿ ಶ್ರೀನಿವಾಸ ಶೆಟ್ಟಿ,ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಗೌಡ,ಜಗದೀಶ್,ಮಾಜಿ ಸದಸ್ಯ ವೆಂಕಟರಮಣಪ್ಪ,ಪುಟ್ಟರಾಜು,ಜೈಕುಮಾರ್ ಸೇರಿದಂತೆ ಮುಂತಾದವರು ಇದ್ದರು. ವೇದ ಬ್ರಹ್ಮ ಉಮಾಶಂಕರ ಶರ್ಮಾ ಅವರ ಮಾರ್ಗದರ್ಷನದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಿತು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



