ಶ್ರೀನಿವಾಸಪುರ: ಶ್ರೀನಿವಾಸಪುರ ತಾಲೂಕು ಯಾವುದೆ ರಿತೀಯಲ್ಲಿ ಅಭಿವೃದ್ಧಿ ಮಾಡಿಲ್ಲ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಆರೋಪಿಸಿದರು.
ಅವರು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಇಂದ್ರಾಣಿರೆಡ್ದಿ ಪರ ಮತ ಯಾಚನೆ ಹಾಗೂ ದೇಣಿಗೆ ಸಂಗ್ರಹ ಕಾರ್ಯಕ್ರಮ ನಡೆಸಿ ಮಾತನಾಡಿದರು. ಇಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಅನಕೂಲಕ್ಕೆ ತಕ್ಕಂತೆ ರಾಜಕಾರಣ ಮಾಡಿಕೊಂಡು ಬರುತ್ತಿದ್ದಾರೆ ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಯಾವುದೆ ವಾತವರಣ ಇಲ್ಲ ಎಂದು ದೂರಿದರು.ಇಲ್ಲಿನ ಪ್ರಭಾವಿ ಶಾಸಕರು ಎರಡು ಬಾರಿ ಸ್ಪೀಕರ್ ಆಗಿದ್ದರು ಮಂತ್ರಿ ಸಹ ಆಗಿದ್ದರು ಮೇಧಾವಿಯಂತೆ ಭಾಷಣ ಮಾಡುವುದರಲ್ಲಿ ಭಾರಿ ಫೇಮಸ್ಸು ಆದರೆ ತಮ್ಮ ಅನಕೂಲಕ್ಕೆ ತಕ್ಕಂತೆ ಆಡಳಿತ ನಡೆಸಿದ್ದಾರೆ ಎಂದರು.
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಾದ್ಯಂತ ಸರ್ಕಾರಿ ಅಧಿಕಾರಿಗಳು ಲಂಚ ಮತ್ತು ಭ್ರಷ್ಟಾಚಾರ ನಡೆಸುವುದನ್ನು ತಡೆಯುತ್ತೇವೆ ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು ತಾಲೂಕಿಗೊಂದು ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ಪ್ರತಿ ತಾಲೂಕಿನಲ್ಲೂ ಸೋಲಾರ್ ಪಾರ್ಕ್ ಮಾಡಿ ಸ್ಥಳೀಯವಾಗಿ ವಿದ್ಯತ್ ಉತ್ಪಾದನೆ ಮಾಡುತ್ತೇವೆ ಜನ ಸಾಮನ್ಯರು ಬದುಕಲು ಉತ್ತಮ ವಾತವರಣ ನಿರ್ಮಾಣ ಮಾಡುತ್ತೇವೆ ಇದನ್ನೆ ನಮ್ಮ ಪಕ್ಷದ ಪ್ರಣಾಳಿಕೆ ಇದೆ ಈ ಅಧಾರದಲ್ಲಿ ಮತಯಾಚಿಸುತ್ತೇವೆ ಎಂದರು.
ಅಭ್ಯರ್ಥಿ ಇಂದ್ರಾಣಿ ರೆಡ್ಡಿ ಮಾತನಾಡಿ ಕೆ ಆರ್ ಎಸ್ ಪಕ್ಷದ ಅಭ್ಯರ್ಥಿಯಾಗಿದ್ದು ಹೆಚ್ಚಿನ ಮತಗಳನ್ನು ನೀಡಿ ಜಯಶೀಲರನ್ನಾಗಿ ಮಾಡಿ ನಿಮ್ಮ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Monday, June 16