ಶ್ರೀನಿವಾಸಪುರ: ತಾಲೂಕಿನಲ್ಲಿ ಹೊಸ ರಾಜಕಿಯ ಭಾಷ್ಯ ಬರೆಯಲು ಮುಂದಾಗಿ ಕಳೆದ ಒಂದು ವರ್ಷದಿಂದ ಪಕ್ಷೇತರ ಅಭ್ಯರ್ಥಿಯಂದು ಕ್ಷೇತ್ರದಾದ್ಯಂತ ಸುತ್ತಾಡಿ ಪರಿಚಿತರಾಗಿರುವ ಗುಂಜೂರು ಶ್ರೀನಿವಾಸರೆಡ್ದಿ 2023ರ ವಿಧಾನಸಭಾ ಘೋಷಣೆಯಾದ ಮರು ದಿನವೆ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಗುಂಜೂರು ಶ್ರೀನಿವಾಸರೆಡ್ದಿ ಅವರ ಆಪ್ತ ವಲಯದ ಮುಖಂಡರು ಹೇಳುವಂತೆ ದಿನಾಂಕ 30/3/23 ಗುರುವಾರ ಶ್ರೀರಾಮನವಮಿಯಂದು ಶ್ರೀನಿವಾಸರೆಡ್ದಿ ಬಿಜೆಪಿಗೆ(BJP) ಸೇರಲಿದ್ದಾರಂತೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವುದಾಗಿ ಹೇಳುತ್ತಾರೆ.
ಬೆಂಗಳೂರು ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನಾಥ ಭವನದಲ್ಲಿ ಗುರುವಾರ ಮಧ್ಯಾಹಃ ವಿಧಾನಪರಿಷತ್ ಮುಖ್ಯ ಸಚೇತಕ ವೈ.ಎ.ನಾರಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ತಮ್ಮ ಬೆಂಬಲಿಗರನ್ನು ಬೆಂಗಳೂರಿಗೆ ಕರೆದೊಯ್ಯಲು ಗುಂಜೂರು ಶ್ರೀನಿವಾಸರೆಡ್ದಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಬಸ್ಸುಗಳನ್ನು ಮತ್ತು ಟಾಟಾ ಸುಮೊಗಳನ್ನು ಬಾಡಿಗೆಗೆ ನಿಗದಿಪಡೆಸಿರುವುದಾಗಿ ಹೇಳಲಾಗುತ್ತಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



