ಶ್ರೀನಿವಾಸಪುರ: ತಾಲೂಕಿನಲ್ಲಿ ಹೊಸ ರಾಜಕಿಯ ಭಾಷ್ಯ ಬರೆಯಲು ಮುಂದಾಗಿ ಕಳೆದ ಒಂದು ವರ್ಷದಿಂದ ಪಕ್ಷೇತರ ಅಭ್ಯರ್ಥಿಯಂದು ಕ್ಷೇತ್ರದಾದ್ಯಂತ ಸುತ್ತಾಡಿ ಪರಿಚಿತರಾಗಿರುವ ಗುಂಜೂರು ಶ್ರೀನಿವಾಸರೆಡ್ದಿ 2023ರ ವಿಧಾನಸಭಾ ಘೋಷಣೆಯಾದ ಮರು ದಿನವೆ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಗುಂಜೂರು ಶ್ರೀನಿವಾಸರೆಡ್ದಿ ಅವರ ಆಪ್ತ ವಲಯದ ಮುಖಂಡರು ಹೇಳುವಂತೆ ದಿನಾಂಕ 30/3/23 ಗುರುವಾರ ಶ್ರೀರಾಮನವಮಿಯಂದು ಶ್ರೀನಿವಾಸರೆಡ್ದಿ ಬಿಜೆಪಿಗೆ(BJP) ಸೇರಲಿದ್ದಾರಂತೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವುದಾಗಿ ಹೇಳುತ್ತಾರೆ.
ಬೆಂಗಳೂರು ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನಾಥ ಭವನದಲ್ಲಿ ಗುರುವಾರ ಮಧ್ಯಾಹಃ ವಿಧಾನಪರಿಷತ್ ಮುಖ್ಯ ಸಚೇತಕ ವೈ.ಎ.ನಾರಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ತಮ್ಮ ಬೆಂಬಲಿಗರನ್ನು ಬೆಂಗಳೂರಿಗೆ ಕರೆದೊಯ್ಯಲು ಗುಂಜೂರು ಶ್ರೀನಿವಾಸರೆಡ್ದಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಬಸ್ಸುಗಳನ್ನು ಮತ್ತು ಟಾಟಾ ಸುಮೊಗಳನ್ನು ಬಾಡಿಗೆಗೆ ನಿಗದಿಪಡೆಸಿರುವುದಾಗಿ ಹೇಳಲಾಗುತ್ತಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



