ಶ್ರೀನಿವಾಸಪುರ:ಚಲಿಸುತ್ತಿದ್ದ ಲಾರಿಗೆ ಸಿಲುಕಿ ದ್ವಿಚಕ್ರ ವಾಹನ ನಡೆಸುತ್ತಿದ್ದ ಯುವಕನೊಬ್ಬ ಸ್ಥಳದಲ್ಲೆ ಮೃತ ಪಟ್ಟ ಘಟನೆ ತಾಲೂಕಿನ ಗೌವನಪಲ್ಲಿ ಪೋಲಿಸ್ ಠಾಣೆ ವ್ಯಾಪ್ತಿಯ ಲಕ್ಷ್ಮಿಪುರ ಕ್ರಾಸ್ ನಲ್ಲಿ ಜಿಯೋ ಪೆಟ್ರೊಲ್ ಬಂಕ್ ಬಳಿ ನಡೆದಿದೆ, ಮೃತ ಯುವಕನನ್ನು ಆಂಧ್ರದ ಅನಮಯ್ಯ ಜಿಲ್ಲೆಯ ರಾಜಂಪೇಟ ಮಂಡಲ್ ಬೇಗಂಪೇಟ ನಿವಾಸಿ ದುರ್ಗಾಪ್ರಸಾದ್ (25) ಎಂದು ಗುರುತಿಸಲಾಗಿದೆ.
ಮೃತ ದ್ವಿಚಕ್ರ ವಾಹನ ಸವಾರ ಆಂಧ್ರದ ನಿವಾಸಿಯಾಗಿದ್ದು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್(software)ಆಗಿ ಕೆಲಸ ಮಾಡುತಿದ್ದು ಭಾನುವಾರ ಬೆಂಗಳೂರಿಗೆ ಹೋಗಲು ಕಳೆದ ಆರು ತಿಂಗಳ ಹಿಂದೆ ಖರೀದಿ ಮಾಡಿದ್ದ ದ್ವಿಚಕ್ರ ವಾಹನದಲ್ಲಿ ಹೋಗುತಿದ್ದ ಈ ಸಂದರ್ಭದಲ್ಲಿ ಲಕ್ಷ್ಮಿಪುರ ಕ್ರಾಸ್ ನಲ್ಲಿ ತೆರಳುವಾಗ ಬಂಕ್ ನಲ್ಲಿ ಡೀಸಲ್ ತುಂಬಿಸಿಕೊಂಡು ರಸ್ತೆಗೆ ಬರುತ್ತಿದ್ದ ಲಾರಿಗೆ ಡಿಕ್ಕಿಹೊಡೆದಿರುತ್ತಾನೆ,ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಅನಾಮತ್ತು ಲಾರಿಗೆ ಕೆಳೆಗೆ ಬಿದ್ದಿರುತ್ತಾನೆ ದ್ವಿಚಕ್ರ ವಾಹನ ರಸ್ತೆಗೆ ಬದಿಗೆ ಬಿದ್ದಿರುತ್ತದೆ,ಲಾರಿ ಹಿಂಬದಿ ಚಕ್ರಕ್ಕೆ ಸಿಲುಕಿದ ದ್ವಿಚಕ್ರ ವಾಹನ ಸವಾರ ಪ್ರಸಾದ್ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೆ ಪ್ರಾಣ ಬಿಟ್ಟಿರುತ್ತಾನೆ.ದ್ವಿಚಕ್ರ ವಾಹನ ಸವಾರ ಹೆಲ್ಮೆಟ್ ಧರಿಸಿದ್ದನಾದರು ಲಾಕ್ ಮಾಡದ ಕಾರಣ ಹೆಲ್ಮೆಟ್ ಹೊರಗೆ ಬಂದು ತಲೆಗೆ ತೀವ್ರವಾಗಿ ಪೆಟ್ಟಾಗಿದೆ ಎಂದು ಅಂದಾಜಿಸಲಾಗಿದೆ.
ಅಪಘಾತ ಸ್ಥಳಕ್ಕೆ ಗ್ರಾಮಾಂತರ ವೃತ್ತ ನೀರಿಕ್ಷಕ ಜಯಾನಂದ್ ಮತ್ತು ಗೌನಿಪಲ್ಲಿ ಪೊಲೀಸ್ ಠಾಣಾಧಿಕಾರಿ ರಾಮ್ ಭೇಟಿ ಪರಶೀಲಿಸಿದ್ದು ಮೃತ ದೇಹವನ್ನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



