ಶ್ರೀನಿವಾಸಪುರ: ಮೇ 10 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂದು ಭಾವಿಸಿ ಪ್ರತಿಯೊಬ್ಬ ನಾಗರಿಕನೂ ಕಡ್ಡಾಯವಾಗಿ ಮತವನ್ನು ಚಲಾಯಿಸಿ, ದೇಶದ ಪ್ರಜಾತಂತ್ರದ ವ್ಯವಸ್ಥೆಯನ್ನುಎತ್ತಿ ಹಿಡಿಯಲು ಪ್ರಯತ್ನ ಮಾಡುವಂತೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣಾಧಿಕಾರಿ ಇ. ಕೃಷ್ಣಪ್ಪ ಕರೆ ಇತ್ತರು.
ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾರರಿಗೆ ಜಾಗೃತಿ ಅಭಿಯಾನ ಸಲುವಾಗಿ ಪಟ್ಟಣ ಎಂ. ಜಿ. ರಸ್ತೆಯಲ್ಲಿ ಮೊಂಬತ್ತಿ ಮತ್ತು ಪಂಜಿನ ಮೆರವಣಿಗೆ ಉದ್ಘಾಟಿಸಿ ಮಾತನಾಡಿದ ಇ.ಒ. ಕೃಷ್ಣಪ್ಪ, ದೇಶ ಮುನ್ನೆಡಸಲು ಉತ್ತಮ ವ್ಯಕ್ತಿಯನ್ನು ಮತದಾನದ ಮೂಲಕ ಆಯ್ಕೆಮಾಡಿಕೊಳ್ಳಲು ಅವಕಾಶ ಇರುತ್ತದೆ 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತದ ಪ್ರಜೆ ಮತದಾನ ಹಕ್ಕು ಚಲಾಯಿಸಬೇಕು, ಈ ನಿಟ್ಟಿನಲ್ಲಿ ಮತದಾರರು ಮೇ 10 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂತೆಯ ತನಕ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಲು ಮುಂದಾಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ಚುನಾವಣಾ ಅಧಿಕಾರಿಗಳಾದ ತಹಸೀಲ್ದಾರ್ ಶೀರಿನ್ತಾಜ್, ವೃತ್ತನಿರೀಕ್ಷಕ ನಾರಾಯಣಸ್ವಾಮಿ, ಪುರಸಭಾ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ, ಬಿ.ಇ.ಒ.ಉಮಾದೇವಿ, ತೋಟಗಾರಿಕಾ ಇಲಾಖಾ ಹಿರಿಯ ಸಹಾಯಕ ನಿರ್ದೇಶಕ ಡಾ.ಎಂ. ಶ್ರೀನಿವಾಸನ್, ನರೇಗ ಎ.ಡಿ.ರಾಮಪ್ಪ, ಪಿ.ಡಿ.ಒ ಕೃಷ್ಣ,ಗೌಸಸಾಬ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



