ಶ್ರೀನಿವಾಸಪುರ: ಮೇ 10 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂದು ಭಾವಿಸಿ ಪ್ರತಿಯೊಬ್ಬ ನಾಗರಿಕನೂ ಕಡ್ಡಾಯವಾಗಿ ಮತವನ್ನು ಚಲಾಯಿಸಿ, ದೇಶದ ಪ್ರಜಾತಂತ್ರದ ವ್ಯವಸ್ಥೆಯನ್ನುಎತ್ತಿ ಹಿಡಿಯಲು ಪ್ರಯತ್ನ ಮಾಡುವಂತೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣಾಧಿಕಾರಿ ಇ. ಕೃಷ್ಣಪ್ಪ ಕರೆ ಇತ್ತರು.
ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾರರಿಗೆ ಜಾಗೃತಿ ಅಭಿಯಾನ ಸಲುವಾಗಿ ಪಟ್ಟಣ ಎಂ. ಜಿ. ರಸ್ತೆಯಲ್ಲಿ ಮೊಂಬತ್ತಿ ಮತ್ತು ಪಂಜಿನ ಮೆರವಣಿಗೆ ಉದ್ಘಾಟಿಸಿ ಮಾತನಾಡಿದ ಇ.ಒ. ಕೃಷ್ಣಪ್ಪ, ದೇಶ ಮುನ್ನೆಡಸಲು ಉತ್ತಮ ವ್ಯಕ್ತಿಯನ್ನು ಮತದಾನದ ಮೂಲಕ ಆಯ್ಕೆಮಾಡಿಕೊಳ್ಳಲು ಅವಕಾಶ ಇರುತ್ತದೆ 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತದ ಪ್ರಜೆ ಮತದಾನ ಹಕ್ಕು ಚಲಾಯಿಸಬೇಕು, ಈ ನಿಟ್ಟಿನಲ್ಲಿ ಮತದಾರರು ಮೇ 10 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂತೆಯ ತನಕ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಲು ಮುಂದಾಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ಚುನಾವಣಾ ಅಧಿಕಾರಿಗಳಾದ ತಹಸೀಲ್ದಾರ್ ಶೀರಿನ್ತಾಜ್, ವೃತ್ತನಿರೀಕ್ಷಕ ನಾರಾಯಣಸ್ವಾಮಿ, ಪುರಸಭಾ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ, ಬಿ.ಇ.ಒ.ಉಮಾದೇವಿ, ತೋಟಗಾರಿಕಾ ಇಲಾಖಾ ಹಿರಿಯ ಸಹಾಯಕ ನಿರ್ದೇಶಕ ಡಾ.ಎಂ. ಶ್ರೀನಿವಾಸನ್, ನರೇಗ ಎ.ಡಿ.ರಾಮಪ್ಪ, ಪಿ.ಡಿ.ಒ ಕೃಷ್ಣ,ಗೌಸಸಾಬ್ ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



