ಶ್ರೀನಿವಾಸಪುರ:ಚುನಾವಣೆ ನಿನ್ನೆ ನಡೆದಿದ್ದು ಚುನಾವಣೆ ನಡೆಯುವ ಸಂದರ್ಬದಲ್ಲಿ ಹೈದರಾಲಿ ಮೊಹಲ್ಲಾದ ಉರ್ದು ಶಾಲೆ ಮತಗಟ್ಟೆ 147 ಬಳಿ ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಕೈ ಕೈ ಮೀಲಾಯಿಸಿದ್ದು ಕಾಂಗ್ರೆಸ್ ಪುರಸಭೆ ಸದಸ್ಯ ಎ.ಟಿ.ಎಸ್. ತಜಮಲ್ ಹಾಗು ಜೆ.ಡಿ.ಎಸ್. ಮುಖಂಡ ಸಾಧಿಕ್ ನಡುವೆ ತೀವ್ರ ಹೊಡೆದಾಟಗಳಾಗಿತ್ತು ಈ ಸಮಯದಲ್ಲಿ ಪೋಲಿಸರು ಲಾಠಿ ಚಾರ್ಜ್ ಮಾಡಿ ಕಾರ್ಯಕರ್ತರನ್ನು ಚದುರಿಸಿದ್ದರು ಆದರೆ ನಿನ್ನೆಯ ಗಲಾಟೆ ಇಂದು ಸಹ ಮುಂದುವರೆದಿದ್ದು ಇಂದು ಗುರುವಾರ ಸಂಜೆ ಉರ್ದು ಸ್ಕೂಲ್ ಬಳಿ ಕುಳತಿದ್ದ ಎ.ಟಿ.ಎಸ್. ತಜಮಲ್ ಅವರನ್ನು ಸಾಧಿಕ್ ಕಡೆಯವರು ಎನ್ನಲಾದ ಯುವಕರು ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ,ಹಲ್ಲೆಗೊಳಗಾದ ವ್ಯಕ್ತಿಯನ್ನು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿಸ್ಥೆಗಾಗಿ ಕೋಲಾರಕ್ಕೆ ಸಾಗಿಸಲಾಗಿದೆ.
ಪಟ್ಟಣದ ಚಿಂತಾಮಣಿ ವೃತ್ತ ಸುತ್ತ ಮುತ್ತ ತ್ವೇಷಮಯ ವಾತಾವರಣ ನಿರ್ಮಾಣವಾಗಿ ಜನ ಅತಂಕ ಗೊಂಡಿದ್ದಾರೆ.ಮುನ್ನೆಚರಿಕೆ ಕ್ರಮವಾಗಿ ಸ್ಥಳದಲ್ಲಿ ರಾಜ್ಯ ಸಶಸ್ತ್ರ ಮೀಸಲು ಪಡೆ ಪೋಲಿಸರನ್ನು ನಿಯೋಜಿಸಿ ಬಿಗಿ ಬದ್ರತೆ ಎರ್ಪಡಿಸಿದೆ,ಘಟನಾ ಸ್ಥಳಕ್ಕೆ ಕೋಲಾರ ಜಿಲ್ಲಾ ಎಸ್.ಪಿ ನಾರಯಣ್ ಡಿ.ವೈ.ಎಸ್.ಪಿ ಜೈಶಂಕರ್ ಭೇಟಿ ನೀಡಿದ್ದಾರೆ, ಪಟ್ಟಣದಲ್ಲಿ ಸೇಕ್ಷನ್ 144 ಜಾರಿ ಮಾಡಲಾಗಿದೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Monday, June 16