ಶ್ರೀನಿವಾಸಪುರ:ಗ್ರಾಮದೇವತೆ ಶ್ರೀಚೌಡೇಶ್ವರಿ ದೇವರಿಗೆ ಜೇಷ್ಠಮಾಸದ ಅಮಾವಸ್ಯೆ ಪೂಜೆಯನ್ನು ಸತ್ಸಂಗ ಬಳಗದ ಗುರುಗಳಾದ ಸತ್ಯಮೂರ್ತಿ ನೇತೃತ್ವದಲ್ಲಿ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಸತ್ಯಮೂರ್ತಿಯವರು ಮಾತನಾಡಿ ಜೇಷ್ಠಮಾಸ ಅಂತ್ಯ ಹಾಗು ಆಷಾಡ ಮಾಸದ ಆರಂಭದಲ್ಲಿ ಶಕ್ತಿದೇವತೆಗೆ ಅನಾವರಣ ಪೂಜೆ ಮಾಡಲಾಗುತ್ತದೆ ಇದೊಂದು ವೈಶಿಷ್ಟಪೂರ್ಣವಾದ ಲೋಕಕಲ್ಯಾಣಾರ್ಥವಾಗಿ ಮಾಡುವಂತ ಪೂಜೆಯಾಗಿದ್ದು ಗ್ರಾಮದ ಸುಹಾಸಿನಿಯರಿಂದ ಗ್ರಾಮದೇವತೆ ಶ್ರೀ ಚೌಡೇಶ್ವರಿ ದೇವಿಯನ್ನು ಶ್ರೀಚಕ್ರ ಪೂಜೆಯಲ್ಲಿ ಒಂಬತ್ತು ಆವರಣಗಳಲ್ಲಿ ನವ ದುರ್ಗೆಯರನ್ನು ಅಹ್ವಾನಿಸಿ ಪೂಜಿಸಲಾಗುತ್ತದೆ ಒಂಬತ್ತು ಬಾರಿ ಅಭಿಷೇಕ ಒಂಬತ್ತು ಬಾರಿ ಆರತಿ ಮತ್ತು ನವಗ್ರಹಗಳಿಗೆ ಪೂಜಾ ಕಾರ್ಯಕ್ರಮ ನಡೆಸಲಾಗುತ್ತದೆ ಮತ್ತು ಅಲಂಕಾರ ಮಾಡಿ ಲೋಕದಲ್ಲಿನ ಸಮಸ್ಯೆಗಳು ದೂರವಾಗಿ ಜನತೆ ಸುಖ ಶಾಂತಿಃ ನೆಮ್ಮದಿಯ ಜೀವನ ಮಾಡಲು ನೇರವಾಗುವಂತೆ ದೇವರನ್ನು ಕೋರಲಾಗುತ್ತದೆ ಎಂದರು.
ಸೋಮವಾರದಿಂದ ಶಂಕರ ಮಠದಲ್ಲಿ ವಾರಾಹಿ ನವರಾತ್ರಿ ಉತ್ಸವಗಳು ಒಂಬತ್ತು ದಿನಗಳಕಾಲ ನಡೆಯಲಿದ್ದು ಪ್ರತಿದಿನ ಸಂಜೆ ಪೂಜಾಕಾರ್ಯಕ್ರಮ ಹಾಗು ಪ್ರವಚನ ಕಾರ್ಯಕ್ರಮ ಇರುತ್ತದೆ ಎಂದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಶಾಂತಮ್ಮ, ಸತ್ಸಂಗ ಬಳಗದ ಸಂಚಾಲಕಿ ಮಂಗಳಾ,ಎಸ್.ಎಸ್.ವಿ.ಎಸ್.ಟ್ರಸ್ಟ್ ಮುಖ್ಯಸ್ಥರಾದ ವನಜಾಕ್ಷಮ್ಮ,ಧನಲಕ್ಷ್ಮೀ,ಮಾಲಿನಿ, ಮುನಿಯಮ್ಮ, ಚಂದ್ರೇಗೌಡ,ಪ್ರಧಾನ ಅರ್ಚಕ ವೇದ ಬ್ರಹ್ಮಸುಬ್ರಮಣ್ಯ,ಮುಂತಾದವರು ಪಾಲ್ಗೋಂಡಿದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



