ಶ್ರೀನಿವಾಸಪುರ:ಗ್ರಾಮದೇವತೆ ಶ್ರೀಚೌಡೇಶ್ವರಿ ದೇವರಿಗೆ ಜೇಷ್ಠಮಾಸದ ಅಮಾವಸ್ಯೆ ಪೂಜೆಯನ್ನು ಸತ್ಸಂಗ ಬಳಗದ ಗುರುಗಳಾದ ಸತ್ಯಮೂರ್ತಿ ನೇತೃತ್ವದಲ್ಲಿ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಸತ್ಯಮೂರ್ತಿಯವರು ಮಾತನಾಡಿ ಜೇಷ್ಠಮಾಸ ಅಂತ್ಯ ಹಾಗು ಆಷಾಡ ಮಾಸದ ಆರಂಭದಲ್ಲಿ ಶಕ್ತಿದೇವತೆಗೆ ಅನಾವರಣ ಪೂಜೆ ಮಾಡಲಾಗುತ್ತದೆ ಇದೊಂದು ವೈಶಿಷ್ಟಪೂರ್ಣವಾದ ಲೋಕಕಲ್ಯಾಣಾರ್ಥವಾಗಿ ಮಾಡುವಂತ ಪೂಜೆಯಾಗಿದ್ದು ಗ್ರಾಮದ ಸುಹಾಸಿನಿಯರಿಂದ ಗ್ರಾಮದೇವತೆ ಶ್ರೀ ಚೌಡೇಶ್ವರಿ ದೇವಿಯನ್ನು ಶ್ರೀಚಕ್ರ ಪೂಜೆಯಲ್ಲಿ ಒಂಬತ್ತು ಆವರಣಗಳಲ್ಲಿ ನವ ದುರ್ಗೆಯರನ್ನು ಅಹ್ವಾನಿಸಿ ಪೂಜಿಸಲಾಗುತ್ತದೆ ಒಂಬತ್ತು ಬಾರಿ ಅಭಿಷೇಕ ಒಂಬತ್ತು ಬಾರಿ ಆರತಿ ಮತ್ತು ನವಗ್ರಹಗಳಿಗೆ ಪೂಜಾ ಕಾರ್ಯಕ್ರಮ ನಡೆಸಲಾಗುತ್ತದೆ ಮತ್ತು ಅಲಂಕಾರ ಮಾಡಿ ಲೋಕದಲ್ಲಿನ ಸಮಸ್ಯೆಗಳು ದೂರವಾಗಿ ಜನತೆ ಸುಖ ಶಾಂತಿಃ ನೆಮ್ಮದಿಯ ಜೀವನ ಮಾಡಲು ನೇರವಾಗುವಂತೆ ದೇವರನ್ನು ಕೋರಲಾಗುತ್ತದೆ ಎಂದರು.
ಸೋಮವಾರದಿಂದ ಶಂಕರ ಮಠದಲ್ಲಿ ವಾರಾಹಿ ನವರಾತ್ರಿ ಉತ್ಸವಗಳು ಒಂಬತ್ತು ದಿನಗಳಕಾಲ ನಡೆಯಲಿದ್ದು ಪ್ರತಿದಿನ ಸಂಜೆ ಪೂಜಾಕಾರ್ಯಕ್ರಮ ಹಾಗು ಪ್ರವಚನ ಕಾರ್ಯಕ್ರಮ ಇರುತ್ತದೆ ಎಂದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಶಾಂತಮ್ಮ, ಸತ್ಸಂಗ ಬಳಗದ ಸಂಚಾಲಕಿ ಮಂಗಳಾ,ಎಸ್.ಎಸ್.ವಿ.ಎಸ್.ಟ್ರಸ್ಟ್ ಮುಖ್ಯಸ್ಥರಾದ ವನಜಾಕ್ಷಮ್ಮ,ಧನಲಕ್ಷ್ಮೀ,ಮಾಲಿನಿ, ಮುನಿಯಮ್ಮ, ಚಂದ್ರೇಗೌಡ,ಪ್ರಧಾನ ಅರ್ಚಕ ವೇದ ಬ್ರಹ್ಮಸುಬ್ರಮಣ್ಯ,ಮುಂತಾದವರು ಪಾಲ್ಗೋಂಡಿದ್ದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Tuesday, June 17