ಶ್ರೀನಿವಾಸಪುರ:ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೋಡೆದ ಕಾರಿಗೆ ಬೆಂಕಿ ತಗುಲಿ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಮದನಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿ ರಾಯಲ್ಪಾಡು ಸಮೀಪ ನಡೆದಿದೆ.
ಬೆಂಕಿ ಅವಘಡಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 4 ಸದಸ್ಯರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅಂಧ್ರಪ್ರದೇಶದ ಕಡಪದ ಕುಟುಂಬವೊಂದು ಕರ್ನಾಟಕ ನೊಂದಣಿ ಹೊಂದಿರುವ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿತ್ತು ಮದನಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿ ರಾಯಲ್ಪಾಡು ಸಮೀಪ ಬರುತ್ತಿದ್ದಂತೆ ತಿರುವಿನಲ್ಲಿ ಕಾರಿನ ಬ್ರೇಕ್ ವಿಫಲವಾಗಿ ಚಾಲಕನ ನಿಯಂತ್ರಣ ತಪ್ಪಿದೆ ರಸ್ತೆ ಬದಿಯಲ್ಲಿನ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೋಡದಿದ್ದು ಕಾರಿನ ಇಂಜಿನ್ ನಲ್ಲಿ ಬೆಂಕಿಹೊತ್ತಿಕೊಂಡಿದೆ ತಕ್ಷಣ ಕಾರಿನಲಿದ್ದ ಕುಟುಂಬಸ್ಥರು ಕಾರಿನಿಂದ ಇಳಿದು ಪ್ರಾಣಗಳನ್ನು ಉಳಿಸಿಕೊಂಡಿದ್ದಾರೆ.
ಕಾರು ಸಿಎನ್ಜಿ-ಪೆಟ್ರೋಲ್ ಆದ ಕಾರಣ ಬೆಂಕಿ ನಂದಿಸಲು ಸಾರ್ವಜನಿಕರು ಹಿಂದೇಟು ಹಾಕಿದ ಹಾಕಿದ ಕಾರಣ ಬೆಂಕಿ ಸಿ.ಎನ್.ಜಿ ಟ್ಯಾಂಕಿಗೆ ಬೆಂಕಿ ತಗುಲಿದರೆ ದೊಡ್ಡ ಮಟ್ಟದ ಅನಾಹುತ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ 30 ನಿಮಿಷಕ್ಕೂ ಹೆಚ್ಚು ಕಾಲ ರಸ್ತೆ ಸಂಪರ್ಕವನ್ನು ರಾಯಲ್ಪಾಡು ಪೊಲೀಸರು ಬಂದ್ ಮಾಡಿಸಿದ್ದರು. ಶ್ರೀನಿವಾಸಪುರ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿ ನಂದಿಸಿದ ನಂತರ ವಾಹನ ಸಂಚಾರಕ್ಕೆ ಪೋಲಿಸರು ಅನುಮತಿಸಿದ್ದಾರೆ.
ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28