ಶ್ರೀನಿವಾಸಪುರ:ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೋಡೆದ ಕಾರಿಗೆ ಬೆಂಕಿ ತಗುಲಿ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಮದನಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿ ರಾಯಲ್ಪಾಡು ಸಮೀಪ ನಡೆದಿದೆ.
ಬೆಂಕಿ ಅವಘಡಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 4 ಸದಸ್ಯರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅಂಧ್ರಪ್ರದೇಶದ ಕಡಪದ ಕುಟುಂಬವೊಂದು ಕರ್ನಾಟಕ ನೊಂದಣಿ ಹೊಂದಿರುವ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿತ್ತು ಮದನಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿ ರಾಯಲ್ಪಾಡು ಸಮೀಪ ಬರುತ್ತಿದ್ದಂತೆ ತಿರುವಿನಲ್ಲಿ ಕಾರಿನ ಬ್ರೇಕ್ ವಿಫಲವಾಗಿ ಚಾಲಕನ ನಿಯಂತ್ರಣ ತಪ್ಪಿದೆ ರಸ್ತೆ ಬದಿಯಲ್ಲಿನ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೋಡದಿದ್ದು ಕಾರಿನ ಇಂಜಿನ್ ನಲ್ಲಿ ಬೆಂಕಿಹೊತ್ತಿಕೊಂಡಿದೆ ತಕ್ಷಣ ಕಾರಿನಲಿದ್ದ ಕುಟುಂಬಸ್ಥರು ಕಾರಿನಿಂದ ಇಳಿದು ಪ್ರಾಣಗಳನ್ನು ಉಳಿಸಿಕೊಂಡಿದ್ದಾರೆ.
ಕಾರು ಸಿಎನ್ಜಿ-ಪೆಟ್ರೋಲ್ ಆದ ಕಾರಣ ಬೆಂಕಿ ನಂದಿಸಲು ಸಾರ್ವಜನಿಕರು ಹಿಂದೇಟು ಹಾಕಿದ ಹಾಕಿದ ಕಾರಣ ಬೆಂಕಿ ಸಿ.ಎನ್.ಜಿ ಟ್ಯಾಂಕಿಗೆ ಬೆಂಕಿ ತಗುಲಿದರೆ ದೊಡ್ಡ ಮಟ್ಟದ ಅನಾಹುತ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ 30 ನಿಮಿಷಕ್ಕೂ ಹೆಚ್ಚು ಕಾಲ ರಸ್ತೆ ಸಂಪರ್ಕವನ್ನು ರಾಯಲ್ಪಾಡು ಪೊಲೀಸರು ಬಂದ್ ಮಾಡಿಸಿದ್ದರು. ಶ್ರೀನಿವಾಸಪುರ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿ ನಂದಿಸಿದ ನಂತರ ವಾಹನ ಸಂಚಾರಕ್ಕೆ ಪೋಲಿಸರು ಅನುಮತಿಸಿದ್ದಾರೆ.
ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



