ಶ್ರೀನಿವಾಸಪುರ:ತಾಲೂಕಿನ ರಾಯಲ್ಪಾಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ರಾಯಲ್ಪಾಡು ಗ್ರಾಮದ ಊರಾಚಗಿನ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಸುಮಾರು 4-5 ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಪೋಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ.
ರಾಯಲ್ಪಾಡು ಗ್ರಾಮದ ಹೊರವಲಯದ ಬಾವಿಯಲ್ಲಿ ಶವ ತೆಲುತ್ತಿರುವ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ರಾಯಲ್ಪಾಡು ಪೊಲೀಸರು ಮೃತ ದೇಹ ಹೊರತಗೆಸಿದ್ದು ಅಂದಾಜು 40 ವರ್ಷದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ,ನೀಲಿ ಬಣ್ಣದ ಶರ್ಟ್ ಹಾಗೂ ಬೆಲ್ಟ್ ಚಪ್ಪಲಿಗಳು ಬಾವಿಯ ದಡದಲ್ಲಿಯೆ ಇದ್ದು ಇದು ಆತ್ಮಹತ್ಯೆ ಇರಬಹುದ ಎನ್ನಲಾಗಿದೆ,ಶವದ ಗುರುತು ಪಡೆಯಲು ಯಾವುದೆ ಪುರಾವೆ ಇಲ್ಲ ಎನ್ನುತ್ತಾರೆ ಪೋಲಿಸರು ಶವವನ್ನು ಕೋಲಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು,ರಾಯಲ್ಪಾಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೆ ವ್ಯಕ್ತಿ ನಾಪತ್ತೆ ಪ್ರಕರಣ ಇಲ್ಲವಾಗಿದ್ದು ಇತರೆ ತಾಲೂಕು ಅಥಾವ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವ್ಯಕ್ತಿ ನಾಪತ್ತೆ ಸಂಭಂದಿತ ಪ್ರಕರಣ ಇದ್ದರೆ ಮಾಹಿತಿ ಪಡೆಯಬಹುದಾಗಿದೆ ಎನ್ನುತ್ತಾರೆ ಪ್ರಕರಣ ದಾಖಲಿಸಿಕೊಂಡಿರುವ ರಾಯಲ್ಪಾಡು ಪೊಲೀಸರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



