ಶ್ರೀನಿವಾಸಪುರ:ಭಾರತದ ಚಂದ್ರಯಾನ-3 ಯಶಸ್ವಿಯಾಗಿದೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ದಕ್ಷಿಣ ಭಾಗದಲ್ಲಿ ಯಶಸ್ವಿಯಾಗಿ ಇಳಿದಿದ್ದು ಇದೊಂದು ವಿಶ್ವ ಸಾಧನೆ ಇದನ್ನು ಸಾಧಿಸಿದ ಮೊದಲ ರಾಷ್ಟ್ರ ನಮ್ಮ ದೇಶ ಎಂದು ಹೆಮ್ಮೆ ಆಗುತ್ತದೆ ಇದರ ಸಂಪೂರ್ಣ ಕೀರ್ತಿ ನಮ್ಮ ಹೆಮ್ಮೆಯ ಇಸ್ರೋ ವಿಜ್ನಾನಿಗಳಿಗೆ ಸಲ್ಲಬೇಕು ಅವರ ಸಾಧನೆ ಅನನ್ಯ ಎಂದು ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಹೇಳಿದರು ಅವರು ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆಯಲ್ಲಿ ರಾಷ್ಟ್ರ ಪ್ರೇಮಿಗಳ ವೇದಿಕೆ ಪಟ್ಟಣದ ಇಂದಿರಾಭವನ್ ವೃತ್ತದಲ್ಲಿ ಆಯೋಜಿಸಿದ್ದ ಸಂಭ್ರದ ವಿಜಯೋತ್ಸವದಲ್ಲಿ ಪಾಲ್ಗೋಂಡು ಮಾತನಾಡಿದರು.
ಭಾರತೀಯ ಜನತಾ ಪಕ್ಷದ ಕೋಲಾರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಚಿರುವನಹಳ್ಳಿಲಕ್ಷ್ಮಣಗೌಡ ಮಾತನಾಡಿ ಚಂದ್ರಯಾನ-3 ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯುವ ಮೂಲಕ ಇಸ್ರೋ ವಿಜ್ನಾನಿಗಳ ಐತಿಹಾಸಿಕ, ಸಾಧನೆಯನ್ನು ಇಡೀ ವಿಶ್ವವೇ ಭಾರತದೆಡೆಗೆ ತಿರುಗಿ ನೋಡುವಂತೆ ಮಾಡಿದೆ, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ವಿಶ್ವಗುರುವನ್ನಾಗಿಸಿದೆ ಎಂದರು.
ರಾಷ್ಟ್ರಧ್ವಜಗಳೊಂದಿಗೆ ಭಾರತ ಮಾತಾ ಕೀ ಜೈ ಘೋಷಣೆಯೊಂದಿಗೆ ಜನತೆ ಹಾಗು ಕಾರ್ಯಕರ್ತರು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಸಪ್ತಗಿರಿ ವಿದ್ಯಾಸಂಸ್ಥೆ ಮುಖ್ಯಸ್ಥ ಪೆದ್ದಣ್ಣ,ಹಿರಿಯ ಮುಖಂಡ ಟಿ.ನಾರಯಣಸ್ವಾಮಿ,ಬಿಜೆಪಿ ಮುಖಂಡ ಹೊದಲಿನಾರಯಣಸ್ವಾಮಿ,ಯುವ ಮುಖಂಡರಾದ ನಾಗದೇನಹಳ್ಳಿ ಚಂದ್ರು,ಸುರೇಶ್ ನಾಯ್ಕ್,ಶ್ರೀನಾಥ್ ಬಾಬು,ಶ್ರೀರಾಮ್,ರಾಮಾಂಜಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27