ಶ್ರೀನಿವಾಸಪುರ:ಭಾರತದ ಚಂದ್ರಯಾನ-3 ಯಶಸ್ವಿಯಾಗಿದೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ದಕ್ಷಿಣ ಭಾಗದಲ್ಲಿ ಯಶಸ್ವಿಯಾಗಿ ಇಳಿದಿದ್ದು ಇದೊಂದು ವಿಶ್ವ ಸಾಧನೆ ಇದನ್ನು ಸಾಧಿಸಿದ ಮೊದಲ ರಾಷ್ಟ್ರ ನಮ್ಮ ದೇಶ ಎಂದು ಹೆಮ್ಮೆ ಆಗುತ್ತದೆ ಇದರ ಸಂಪೂರ್ಣ ಕೀರ್ತಿ ನಮ್ಮ ಹೆಮ್ಮೆಯ ಇಸ್ರೋ ವಿಜ್ನಾನಿಗಳಿಗೆ ಸಲ್ಲಬೇಕು ಅವರ ಸಾಧನೆ ಅನನ್ಯ ಎಂದು ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಹೇಳಿದರು ಅವರು ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆಯಲ್ಲಿ ರಾಷ್ಟ್ರ ಪ್ರೇಮಿಗಳ ವೇದಿಕೆ ಪಟ್ಟಣದ ಇಂದಿರಾಭವನ್ ವೃತ್ತದಲ್ಲಿ ಆಯೋಜಿಸಿದ್ದ ಸಂಭ್ರದ ವಿಜಯೋತ್ಸವದಲ್ಲಿ ಪಾಲ್ಗೋಂಡು ಮಾತನಾಡಿದರು.
ಭಾರತೀಯ ಜನತಾ ಪಕ್ಷದ ಕೋಲಾರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಚಿರುವನಹಳ್ಳಿಲಕ್ಷ್ಮಣಗೌಡ ಮಾತನಾಡಿ ಚಂದ್ರಯಾನ-3 ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯುವ ಮೂಲಕ ಇಸ್ರೋ ವಿಜ್ನಾನಿಗಳ ಐತಿಹಾಸಿಕ, ಸಾಧನೆಯನ್ನು ಇಡೀ ವಿಶ್ವವೇ ಭಾರತದೆಡೆಗೆ ತಿರುಗಿ ನೋಡುವಂತೆ ಮಾಡಿದೆ, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ವಿಶ್ವಗುರುವನ್ನಾಗಿಸಿದೆ ಎಂದರು.
ರಾಷ್ಟ್ರಧ್ವಜಗಳೊಂದಿಗೆ ಭಾರತ ಮಾತಾ ಕೀ ಜೈ ಘೋಷಣೆಯೊಂದಿಗೆ ಜನತೆ ಹಾಗು ಕಾರ್ಯಕರ್ತರು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಸಪ್ತಗಿರಿ ವಿದ್ಯಾಸಂಸ್ಥೆ ಮುಖ್ಯಸ್ಥ ಪೆದ್ದಣ್ಣ,ಹಿರಿಯ ಮುಖಂಡ ಟಿ.ನಾರಯಣಸ್ವಾಮಿ,ಬಿಜೆಪಿ ಮುಖಂಡ ಹೊದಲಿನಾರಯಣಸ್ವಾಮಿ,ಯುವ ಮುಖಂಡರಾದ ನಾಗದೇನಹಳ್ಳಿ ಚಂದ್ರು,ಸುರೇಶ್ ನಾಯ್ಕ್,ಶ್ರೀನಾಥ್ ಬಾಬು,ಶ್ರೀರಾಮ್,ರಾಮಾಂಜಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



