ಶ್ರೀನಿವಾಸಪುರ:ಶ್ರೀನಿವಾಸಪುರ ತಾಲೂಕಿನಲ್ಲಿ ನಿರುದ್ಯೊಗ ಸಮಸ್ಯೆ ನಿವಾರಣೆಗೆ ಪಟ್ಟಣಕ್ಕೆ ಹೊಂದಿಕೊಂಡಂತೆ ಕೈಗಾರಿಕ ಪ್ರದೇಶ ನಿರ್ಮಾಣ ಮಾಡಲು ಯೋಜನೆ ಸಿದ್ದಪಡಿಸುತ್ತಿರುವುದಾಗಿ ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು ಅವರು ಇಂದು ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿ ವಿಕ್ಷಿಸಿ ಮಾತನಾಡಿದ ಅವರು ತಾಲೂಕಿಗೆ ಕೈಗಾರಿಕೆಗಳು ಬಂದರೆ ಇಲ್ಲಿನ ನಿರುದ್ಯೊಗಿ ಯುವಕರ ಸಮಸ್ಯೆ ಬಗೆಹರೆಯಲು ಸಹಕಾರಿಯಾಗುತ್ತದೆ ಎಂದರು.
ತಾಲೂಕಿನ ಮುಳಬಾಗಿಲು ರಸ್ತೆ ಅಥಾವ ಪುಂಗನೂರು ರಸ್ತೆಯಲ್ಲಿ ಜಮೀನು ಗುರುತಿಸಿ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡುವ ಕುರಿತಾಗಿ ಕೈಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ರೂಪು ರೇಷೆ ಸಿದ್ದಪಡಿಸುವುದಾಗಿ, ಮಾವು ಟಮ್ಯಾಟೊ ಸೇರಿದಂತೆ ತೋಟಗಾರಿಕೆ ಬೆಳೆಗಳ ಸಂಸ್ಕರಣ ಘಟಕಗಳು ಮತ್ತು ಕೃಷಿ ಆಧಾರಿತ ಕೈಗಾರಿಕೆಗಳ ನಿರ್ಮಾಣ ಸ್ಥಾಪನೆಗೆ ಆದ್ಯತೆ ನೀಡಲಾಗುವುದು ಎಂದರು.
ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣ
ಕ್ರೀಡಾಂಗಣಕ್ಕೆ ಹೊಂದಿಕೊಂಡಂತೆ ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣಕ್ಕೆ ಸಂಸದ ಮುನಿಶಾಮಿ ತಮ್ಮ ನಿಧಿಯಿಂದ ಹಣ ನೀಡಲಿದ್ದು ಇದಕ್ಕೆ ಸಂಬಂದಿಸಿದಂತೆ ಜಮೀನು ನೀಡುವುದಾಗಿ ತಿಳಿಸಿದ ಶಾಸಕ ವೆಂಕಟಶಿವಾರೆಡ್ಡಿ ಪಟ್ಟಣದ ಜನರ ಕ್ರೀಡಾಚಟುವಟಿಕೆಗಾಗಿ ಅತ್ಯಾಧುನಿಕವಾಗಿ ಕ್ರೀಡಾಂಗಣ ಸರ್ವರೀತಿಯಲ್ಲೂ ನವೀಕರಣವಾಗುತ್ತಿದೆ ಹಾಗೆ ಸುಸಜ್ಜಿತ ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣಕ್ಕೆ ಸದ್ಯದಲ್ಲಿಯೆ ಭೂಮಿ ಪೂಜೆ ಮಾಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ,ಲೋಕೋಪಯೋಗಿ ಇಲಾಖೆ ಅಭಿಯಂತರ ಟಿ.ನಾಗರಾಜ್,ಗುತ್ತಿಗೆದಾರರಾದ ಶಿವಾರೆಡ್ಡಿ,ಕಂಬಾಲಹಳ್ಳಿ ಶ್ರೀನಿವಾಸರೆಡ್ಡಿ,ಯುವ ಮುಖಂಡರಾದ ದುರ್ಗಾಪ್ರಸಾದ್,ಗುರುಮೂರ್ತಿ ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27