ಶ್ರೀನಿವಾಸಪುರ: ಅರಣ್ಯ ಒತ್ತುವರಿ ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದೆ ತೆರವು ವಿರೋಧಿಸಿ ಸಂಸದ ಮುನಿಸ್ವಾಮಿ ಪ್ರಚೋದನೆ ಮಾತುಗಳ ನಂತರ ನರೆದಿದ್ದ ಜನತೆ ಆವೇಶಭರಿತರಾಗಿ ವರ್ತಿಸಿದ ಪರಿಣಾಮ ತೆರವು ಕಾರ್ಯದಲ್ಲಿದ್ದ ಅರಣ್ಯ ಇಲಾಖೆ ಜೆಸಿಬಿಗಳ ಮೇಲೆ ಶನಿವಾರ ಕಲ್ಲು ತೂರಾಟ ನಡೆಯಿತು. ನಂತರದಲ್ಲಿ ಸ್ಥಳದಲ್ಲಿ ಪ್ರಕ್ಷುಬ್ದತೆ ಉಂಟಾಗಿ ಪೋಲಿಸರು ಮದ್ಯ ಪ್ರವೇಶಿಸಿ ಕಾರ್ಯಚರಣೆ ನಡೆಸಿ ಪರಿಸ್ಥಿತಿ ಶಾಂತಗೊಳಿಸಿದ್ದರು. ಶನಿವಾರ ಸಂಜೆ ಅರಣ್ಯ ಇಲಾಖೆ ಹಾಗು ಜೆಸಿಬಿ ಮಾಲಿಕರು ಚಾಲಕರು ನೀಡಿದ ದೂರಿನನ್ವಯ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ಹಲವರು ಪೋಲಿಸರ ಅಥಿತಿಗಳಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಆವೇಶದಿಂದ ವರ್ತಿಸಿದ ಜನ ಬಚಾವಾಗಿದ್ದರೆ, ತಮಾಷೆ ನೊಡಲು ಬಂದಂತವರು ಪೋಲಿಸರ ವಶದಲ್ಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ರಾಜ್ಯ ಬಿಜೆಪಿ ಮುಖಂಡರು ಬರ್ತಾರೆ ಎಂಬ ರಾಜಕೀಯ ಹೈಡ್ರಾಮ
ತೆರವು ವಿರೋಧ ಕಾರ್ಯಕ್ರಮದ ಬೆಳವಣಿಗೆಯ ನಂತರ ನಡೆದಂತ ರಾತ್ರಿ ಕಾರ್ಯಚರಣೆಯಲ್ಲಿ ಹಲವರ ಬಂಧನಕ್ಕೆ ಕಾರಣವಾಗಿ ಇದನ್ನು ವಿರೋಧಿ ಅರಣ್ಯ ಸಂತ್ರಸ್ತರನ್ನು ಸಂತೈಸಲು ರಾಜ್ಯ ಬಿಜೆಪಿ ಮುಖಂಡರಾದ ಮಾಜಿ ಕಂದಾಯ ಮಂತ್ರಿ ಆರ್.ಆಶೋಕ್ ಸೇರಿದಂತೆ ಹಲವರು ಶ್ರೀನಿವಾಸಪುರಕ್ಕೆ ಆಗಮಿಸುತ್ತಾರೆ ಎಂಬೆಲ್ಲಾ ಸುದ್ದಿ ಹರಿದಾಡಿತ್ತಾದರೂ ಕೊನೆಗೂ ಯಾರು ಬಾರದೆ ಮತ್ತೆ ಭಾನುವಾರ ಸಂಸದ ಮುನಿಸ್ವಾಮಿ,ಶಿಡ್ಲಘಟ್ಟದ ಮಾಜಿ ಶಾಸಕ ರಾಜಣ್ಣ,ಸೀಕಲ್ ರಾಮಚಂದ್ರೇಗೌಡ ಸೇರಿದಂತೆ ಹಲವರು ಶ್ರೀನಿವಾಸಪುರಕ್ಕೆ ಆಗಮಿಸಿ,ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಪ್ರಾಣಪಯದಿಂದ ಬದುಕುಳಿದು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಲೂಕಿನ ಪಾಳ್ಯ ಗ್ರಾಮದ ಕಾಂಗ್ರೆಸ್ ಮುಖಂಡ ಗೋಪಾಲರೆಡ್ಡಿಯವರ ಪತ್ನಿ ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷೆ ಶ್ಯಾಮಲಮ್ಮ ಹಾಗು ರೋಣೂರು ಹೋಬಳಿಯ ನಾರಮಾಕಲಹಳ್ಳಿ ಗ್ರಾಮದ ಪಾರ್ವತಮ್ಮ ರೈತ ಮಹಿಳೆಯರನ್ನು ಮಾತನಾಡಿದ ಅವರು ನೇರವಾಗಿ ಪತ್ರಕರ್ತರ ಮುಂದೆ ನಿಂತು ಸಿದ್ದರಾಮಯ್ಯ ಸರ್ಕಾರದ ವಿರುದ್ದ ಗುಡುಗಿದರು ನಂತರದಲ್ಲಿ ಆಸ್ಪತ್ರೆಯಲ್ಲೆ ಪೋಲಿಸರೊಂದಿಗೆ ಮಾತುಕತೆ ನಡೆಸಿದ ಸಂಸದ ಮುನಿಸ್ವಾಮಿ ಹೋರಟರೆ ಇತ್ತ ಕೋಲಾರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಾರಯಣ್ ಪತ್ರಕರ್ತರೊಂದಿಗೆ ಮಾತನಾಡಿ ಸಂಸದ ಮುನಿಸ್ವಾಮಿ ಮೇಲೆ ಶ್ರೀನಿವಾಸಪುರ ಠಾಣೆಯಲ್ಲಿ ಎರಡು ದೂರುಗಳು ದಾಖಲಾಗಿದ್ದು ಇನ್ನೊಂದಷ್ಟು ಜನರ ವಿರುದ್ದ ಪ್ರಕರಣ ದಾಖಲಾಗಿದೆ ಈಗ 15 ಜನರನ್ನು ಬಂಧಿಸಿದ್ದು ಉಳಿದವರನ್ನು ಬಂಧಿಸಲಾಗುವುದು ಎಂದು ತಿಳಿಸಿದರು.
ವಿಷ ಸೇವಿಸಿ ಪ್ರಾಣಾಪಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿರುವ ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷೆ ಶ್ಯಾಮಲಮ್ಮ ವಿರುದ್ದವೂ ಪೋಲಿಸ್ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



