ಶ್ರೀನಿವಾಸಪುರ:ಯಾರು ಆತಂಕ ಪಡಬೇಡಿ, ನಿಮ್ಮನ್ನು ಯಾರು ಏನು ಮಾಡುವುದಿಲ್ಲ ನೀವು ಧೈರ್ಯದಿಂದ ಇರಿ ನಿಮ್ಮೊಂದಿಗೆ ನಾನು ಇರುತ್ತೇನೆ ಎಂದು ಶಾಸಕ ವೆಂಕಟಶಿವಾರೆಡ್ಡಿ ತಾಲೂಕಿನ ನಂಬಿಹಳ್ಳಿ ಗ್ರಾಮಸ್ಥರಿಗೆ ಧೈರ್ಯ ತುಂಬಿದರು ಅವರು ಶನಿವಾರ ನಂಬಿಹಳ್ಳಿ ಗ್ರಾಮಕ್ಕೆ ತೆರಳಿ ಗ್ರಾಮಸ್ಥರೊಂದಿಗೆ ಮಾತನಾಡಿ ಯಾರು ಆತಂಕ ಪಡುವುದು ಬೇಡ ಗ್ರಾಮದಲ್ಲಿ ದುರದೃಷ್ಟಕರ ಘಟನೆ ನಡೆಯಬಾರದು ನಡೆದುಹೋಗಿದೆ ಇದು ಅತ್ಯಂತ ನೋವಿನ ವಿಚಾರ,ಘಟನೆ ನಡೆದಾಗ ಜನತೆ ಭಾವೋದ್ವೇಗಕ್ಕೆ ಒಳಗಾದ ವಿಚಾರದಲ್ಲಿ ಗ್ರಾಮಸ್ಥರ ಮೇಲೆ ಪೋಲಿಸ್ ಪ್ರಕರಣ ದಾಖಲಾಗಿರುವ ಕುರಿತಾಗಿ ಮಾತನಾಡಿದ ಅವರು ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ನಾನು ಮಾತನಾಡುತ್ತೇನೆ ಯಾರು ಭಯಪಡಬೇಡಿ ಗ್ರಾಮದಲ್ಲಿ ಶಾಂತಿ ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸಿಕೊಳ್ಳುವಂತೆ ಹೇಳಿದರು.
ಮೃತ ಮಹಿಳೆ ಕುಟುಂಬಸ್ಥರನ್ನು ಭೇಟಿ ಮಾಡಿದ ಶಾಸಕ ಅವರ ಕುಟುಂಬ ಸದಸ್ಯರನ್ನು ಮಾತನಾಡಿ ಘಟನೆ ನಡೆದಿರುವುದು ವಿಷಾಧಕರ ನನಗೆ ವೈಯುಕ್ತಿಕವಾಗಿ ನೋವಾಗಿದೆ ತಾವು ಧೈರ್ಯದಿಂದ ಇರುವಂತೆ ತಿಳಿಸಿದರು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸುವ ಭರವಸೆ ನೀಡಿದರು.
ಪೋಲಿಸ್ ಕೇಸಿಗೆ ಹೆದರಿ ಊರು ಬಿಟ್ಟ ಜನರು
ನಂಬಿಹಳ್ಳಿ ಗ್ರಾಮದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆಯಾದ ನಂತರದಲ್ಲಿ ಗ್ರಾಮಸ್ಥರು ಭಾವೋದ್ವೇಗಕ್ಕೆ ಒಳಗಾಗಿ ಮಹಿಳೆಯನ್ನು ಕೊಂದ ಆರೋಪಿ ನಾಗೇಶ್ ನಿಗೆ ನಾವೆ ಶಿಕ್ಷೆ ಕೊಡುತ್ತೇವೆ ಅವನನ್ನು ನಮಗೆ ಹಸ್ತಾಂತರಿಸುವಂತೆ ಒತ್ತಾಯಿಸಿ ನಂಬಿಹಳ್ಳಿ ಹಾಗು ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರು ಪೋಲಿಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಲ್ಲದೆ ಆರೋಪಿ ನಾಗೇಶ್ ಅವಿತು ಕುಳತಿದ್ದ ಕಟ್ಟಡದ ಮೇಲೆ ಪೋಲಿಸರು ಇರುವುದನ್ನು ಲೆಕ್ಕಿಸದೆ ಕಲ್ಲೇಸೆದು ದಾಳಿ ಮಾಡಿದರು,ಸ್ಥಳದಲ್ಲಿ ಕೋಲಾರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಇದ್ದರು ಸಹ ಅವರನ್ನು ನೂಕನುಗ್ಗಲಿನಲ್ಲಿ ಎಳೆದಾಡಿದಲ್ಲದೆ ಅವರ ಮನವಿಗೂ ಸ್ಪಂದಿಸದ ಕೆಲವರು ಆವೇಶದಿಂದ ವರ್ತಿಸಿದ ಪರಿಣಾಮ ಪೋಲಿಸರು ಅನಿವಾರ್ಯವಾಗಿ ಗಾಳಿಯಲ್ಲು ಗುಂಡು ಹಾರಿಸಿ ಜನರನ್ನು ಚದರಿಸಿದರು ಈ ಹಿನ್ನಲೆಯಲ್ಲಿ ಜನರ ವರ್ತನೆ ಪೋಲಿಸರ ಕರ್ತವ್ಯಕ್ಕೆ ಅಡ್ದಿ ಪಡಿಸಿದ ಆರೋಪಕ್ಕೆ ಒಳಗಾಗಿದ್ದು ಈ ಬಗ್ಗೆ ಪೋಲಿಸ್ ಅಧಿಕಾರಿ ಈಶ್ವರಪ್ಪ ನೀಡಿರುವ ದೂರಿನನ್ವಯ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನರ ವಿರುದ್ದ ಪೋಲಿಸ್ ಇಲಾಖೆಯಲ್ಲಿ ದೂರು ದಾಖಲಾಗಿದೆ,ಸೆಕ್ಷನ್ 143, 147, 148, 307, 353, 149 ಅಡಿ ದೂರು ದಾಖಲುಮಾಡಿಕೊಂಡಿರುವ ಪೋಲಿಸರು ದೂರಿನಲ್ಲಿ ಹೆಸರು ಇರುವಂತವರನ್ನು ಭಂಧನಕ್ಕೆ ಮುಂದಾಗಿರುವ ಹಿನ್ನಲೆಯಲ್ಲಿ ನಂಬಿಹಳ್ಳಿಯ ಗ್ರಾಮದ ಬಹುತೇಕ ಪುರುಷರು ಊರು ಕಾಲಿಮಾಡಿರುತ್ತಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28