ಶ್ರೀನಿವಾಸಪುರ:ರಸ್ತೆಬದಿಯಲ್ಲಿ ವ್ಯಾಪಾರ ಮಾಡುವಂತ ಸಣ್ಣ-ಪುಟ್ಟ ವ್ಯಾಪಾರಸ್ಥರಿಗೆ ಆರ್ಥಿಕ ನೆರವು ಒದಗಿಸುವ ಸಲುವಾಗಿ ಪ್ರಧಾನಿಮಂತ್ರಿ ಮೋದಿ ಸರಕಾರ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಪ್ರಾರಂಬಿಸಿದೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಪೈಕಿ ಒಂದಾಗಿರುವ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾಗಿದ್ದು, ಇದರ ಸೌಲತ್ತು ಪಡೆದುಕೊಂಡು ಸಣ್ಣ-ಪುಟ್ಟ ವ್ಯಾಪಾರಿಗಳು ಅರ್ಥಿಕವಾಗಿ ಅಭಿವೃದ್ಧಿಯಾಗುವಂತೆ ಸಂಸದ ಮುನಿಸ್ವಾಮಿ ಕರೆ ಇತ್ತರು ಅವರು ಪುರಸಭೆ ಆವರಣದಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಅನುಷ್ಠಾನಗೊಳಿಸಿರುವ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ’ (ಪಿಎಂ ಸ್ವನಿಧಿ) ಯೋಜನೆಯಡಿ ಅಯ್ಕೆಯಾಗಿರುವ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು ಮೀಟರ್ ಬಡ್ಡಿ ಮಾಫಿಯಾದಲ್ಲಿ ಬೀದಿ ವ್ಯಾಪಾರಿಗಳು ಸಿಲುಕದೆ ಆತ್ಮವಿಶ್ವಾಸದಿಂದ ವ್ಯಾಪಾರ ವಹಿವಾಟು ಮಾಡಿಕೊಳ್ಳಲು ಪ್ರಧಾನಿ ಮೋದಿ ಅವರು ಪಿಎಂ ಸ್ವನಿಧಿ ಯೋಜನೆ ಪ್ರಾರಂಭಿಸಿರುತ್ತಾರೆ
ಬೀದಿ ಬದಿ, ತಳ್ಳುವಗಾಡಿ, ಸಣ್ಣ ಸಣ್ಣ ವ್ಯಾಪಾರಿಗಳನ್ನು ಗುರುತಿಸಿ ಕೇಂದ್ರ ಸರ್ಕಾರದ ಸವಲತ್ತುಗಳನ್ನು ನೀಡುವ ಸಲುವಾಗಿ ಕಾರ್ಯಕ್ರಮ ರೂಪಿಸಲಾಗಿದೆ. ಬಡತನದಲ್ಲಿದ್ದು ವ್ಯಾಪಾರ ಮಾಡುವವರು ಮೀಟರ್ ಬಡ್ಡಿ ದಂದೆಗೆ ಸಿಲುಕದೆ ನೆಮ್ಮದಿಯ ಬದುಕು ಸಾಗಿಸಲು ನೆರವು ನೀಡುವಂತ ಕಾರ್ಯಕ್ರಮ ಆಗಿದ್ದು ಅರ್ಹರು ಯಾವುದೇ ಅಡಮಾನವಿಲ್ಲದೆ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದ್ದು ಆರಂಭಿಕವಾಗಿ 10 ಸಾವಿರ ಸಾಲ ತೆಗೆದುಕೊಳ್ಳಬಹುದು.ಸಾಲದ ಹಣವನ್ನು ಒಂದು ವರ್ಷದೊಳಗೆ ಮರುಪಾವತಿ ಮಾಡಬೇಕು.ನಿಗದಿತ ಅವಧಿಯೊಳಗೆ ಮರುಪಾವತಿ ಮಾಡಿದವರ ಸಾಲದ ಅರ್ಹತೆಯನ್ನು ಹೆಚ್ಚಿಸಿ, ಬಳಿಕ 20 ಸಾವಿರ ರೂ.ಗಳವರೆಗೆ ಸಾಲ ಕೊಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಸತ್ಯನಾರಯಣ,ಕೋಲಾರ ಜಿಲ್ಲಾ ಬೆಜೆಪಿ ಅಧ್ಯಕ್ಷ ಡಾ.ವೇಣೂಗೋಪಾಲ್,ಮುಖಂಡರಾದ ರೋಣೂರುಚಂದ್ರಶೇಖರ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



