ಶ್ರೀನಿವಾಸಪುರ:ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕದ ವಿವಿಧ ಕನ್ನಡ ಹಾಗು ಇತರೆ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ರಾಜ್ಯ ಬಂದ್ಗೆ ಶ್ರೀನಿವಾಸಪುರದಲ್ಲಿ ಸ್ಪಂದನೆ ಸಿಗದೆ ಬಂದ್ ನಡೆಯಲೆ ಇಲ್ಲ.ಶ್ರೀನಿವಾಸಪುರ ಪಟ್ಟಣದಲ್ಲಿ ಜನ ಸಂಚಾರ ಕಡಿಮೆ ಇತ್ತಾದರು ಶುಕ್ರವಾರ ಎಲ್ಲವೂ ಎಂದಿನಂತೆ ಮಾಮೂಲಾಗಿತ್ತು,ಸ್ಥಳೀಯವಾಗಿ ಯಾವುದೆ ಕನ್ನಡ ಹಾಗು ಇತರೆ ಸಂಘಟನೆಗಳು ಬಂದ್ ನಿರ್ವಹಣೆಗೆ ಮುಂದಾಗದ ಪರಿಣಾಮ ಮುಂಜಾನೆಯಿಂದಲೆ ಅಂಗಡಿ-ಮುಂಗಟ್ಟುಗಳನ್ನು ತೆರೆದಿದ್ದ ವ್ಯಾಪರಸ್ಥರು ವ್ಯಾಪರ ವಹಿವಾಟನ್ನು ನಡೆಸಿಕೊಂಡಿದ್ದರು,ತಿಂಡಿ ಹೋಟೆಲ್ಗಳು ಟೀ ಅಂಗಡಿಗಳು ತೆರೆದಿದ್ದವು,ರಾಜ್ಯ ರಸ್ತೆ ಸಾರಿಗೆ ಬಸ್ಸುಗಳು ಮಾಮೂಲಿನಂತೆ ಸಂಚಿರಿಸಿತಾದರೂ ಜನ ಸಂಚಾರ ಇಲ್ಲದ ಹಿನ್ನಲೆಯಲ್ಲಿ ಮಧ್ಯಾನದ ಹೊತ್ತಿಗೆ ಬಸ್ಸುಗಳ ಓಡಾಟ ನಿಲ್ಲಿಸಲಾಯಿತು.ಬಹುತೇಕ ಖಾಸಗಿ ಶಾಲೆಗಳು ಬಾಗಿಲು ತೆರೆಯಲಿಲ್ಲ, ಬ್ಯಾಂಕ್ ಸೇರಿದಂತೆ ಖಾಸಗಿ ಹಣಕಾಸು ಸಂಸ್ಥೆಗಳು ಕಾರ್ಯನಿರ್ವಹಿದರೆ, ಸದಾ ಗಿಜಗೂಡುತ್ತಿದ್ದ ತಾಲೂಕು ಕಚೇರಿ ಅವರಣದಲ್ಲಿ ಜನ ಸಂಚಾರ ಕಡಿಮೆ ಇದ್ದು ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ಕಡಿಮೆ ಇತ್ತು.ಪಟ್ಟಣದಲ್ಲಿ ಸರ್ಕಾರಿ ಶಾಲ-ಕಾಲೇಜುಗಳು ಬಾಗಿಲು ತೆಗೆತ್ತಿದ್ದಾರೂ ವಿಧ್ಯಾರ್ಥಿಗಳು ಬಾರದ ಹಿನ್ನಲೆಯಲ್ಲಿ ಮಧ್ಯಾನಃದ ಹೊತ್ತಿಗೆ ಬಾಗಿಲು ಹಾಕಲಾಯಿತು,ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳು ಎಂದಿನಂತೆ ಇದ್ದು ವಿದ್ಯಾರ್ಥಿಗಳ ಹಾಜರಿ ಇತ್ತಾದರೂ ಶಿಕ್ಷಕರು ಉಪನ್ಯಾಸಕರ ಹಾಜರಾತಿ ಇರಲಿಲ್ಲ. ಇನ್ಸಪೇಕ್ಟರ್ ದಯಾನಂದ್ ನೇತೃತ್ವದಲ್ಲಿ ಪಟ್ಟಣದಲ್ಲಿ ಬೀಗಿ ಪೋಲಿಸ್ ಬಂದೋ ಬಸ್ತ್ ಆಯೋಜಿಸಲಾಗಿತ್ತು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



