ಶ್ರೀನಿವಾಸಪುರ:ಸರ್ಕಾರಿ ಶಾಲೆ ಜಮೀನು ಒತ್ತುವರಿ ವಿಚಾರದಲ್ಲಿ ಗ್ರಾಮದ ಎರಡು ಗುಂಪುಗಳ ನಡುವೆ ಹೊಡೆದಾಟಗಳಾಗಿರುವ ಘಟನೆ ಇಂದು ಗೌವನಪಲ್ಲಿ ಪೋಲಿಸ್ ಠಾಣೆ ವ್ಯಾಪ್ತಿಯ ಪಾಪಿಶೆಟ್ಟಿಪಲ್ಲಿ ಗ್ರಾಮದಲ್ಲಿ ನಡೆದಿರುತ್ತದೆ.
ಪಾಪಿಶೆಟ್ಟಿಪಲ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಜಮೀನು ಒತ್ತುವರಿಯಾಗಿದ್ದು ಈ ಸಂಬಂದ ಶಾಲೆಯ ಮುಖ್ಯೋಪಾದ್ಯಾಯ ಎಲ್.ಶ್ರೀರಾಮ್ ಅವರು ಗೌವನಪಲ್ಲಿ ಗ್ರಾಮಪಂಚಾಯಿತಿಗೆ ಅರ್ಜಿ ನೀಡಿ ಶಾಲೆ ಜಮೀನು ಅಳತೆ ಮಾಡಿಕೊಡುವಂತೆ ಮನವಿ ಮಾಡಿದ್ದರು ಅದರಂತೆ ಇಂದು ಗೌವನಪಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೌಸ್ ಸಾಬ್ ಮತ್ತು ಸಿಬ್ಬಂದಿ ಪಾಪಿಶೆಟ್ಟಿಪಲ್ಲಿ ಗ್ರಾಮಕ್ಕೆ ತೆರಳಿ ಶಾಲಾ ಜಮೀನು ಅಳತೆ ಮಾಡಲು ತಯಾರಿ ನಡೆಸುತ್ತಿದ್ದಂತೆ ಗ್ರಾಮದಲ್ಲಿ ಜಮೀನು ವಿಚಾರವಾಗಿ ಪರ-ವಿರೋಧವಾಗಿ ಎರಡು ಗುಂಪುಗಳು ಶಾಲೆ ಬಳಿ ಜಮಾವಣೆಯಾಗಿ ಪರಸ್ಪರ ಆರೋಪ ಪ್ರತ್ಯಾರೋಗಳನ್ನು ಮಾಡಿಕೊಳ್ಳುತ್ತಿದ್ದಂತೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿಬ್ಬಂದಿ ಅಳತೆ ಮಾಡದೆ ವಾಪಸ್ಸು ಬಂದಿರುತ್ತಾರೆ ನಂತರದಲ್ಲಿ ಗ್ರಾಮದ ಸರ್ಕಾರಿ ಶಾಲೆ ಜಮೀನು ಅನ್ನು ಶಾಲೆ ಆವರಣಕ್ಕೆ ಹೊಂದಿಕೊಂಡಂತೆ ಇರುವ ಶ್ರೀನಿವಾಸ್ ಅನ್ನುವರು ಒತ್ತುವರಿ ಮಾಡಿದ್ದಾರೆ ಜಮೀನು ಒತ್ತುವರಿ ವಿಚಾರ ಇತ್ಯರ್ಥ ಆಗುವವರಿಗೂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಲ್ಲಿ ಅಕ್ರಮವಾಗಿ ನಿರ್ಮಾಣ ಮಾಡುತ್ತಿರುವ ಶಾಲಾ ಕಾಂಪೌಂಡ್ ಅನ್ನು ನಿರ್ಮಾಣ ಮಾಡಲು ಅವಕಾಶ ನೀಡಬಾರದು ಎಂದು ಶಾಲೆಯ ಹಳೇಯ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ ಶಾಲಾ ಜಮೀನು ಒತ್ತುವರಿ ವಿಚಾರ ಗ್ರಾದಲ್ಲಿ ರಾಜಕೀಯ ತಿರವು ಪಡೆದುಕೊಂಡಿದೆ ಗ್ರಾಮದಲ್ಲಿನ ಕಾಂಗ್ರೇಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಕೊಲು, ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ ಎರಡು ಪಕ್ಷಗಳ ಕಾರ್ಯಕರ್ತರಿಗೆ ಗಾಯಗಳಾಗಿದ್ದು ಗೌನಿಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿಸ್ಥೆ ಕೊಡಿಸಿ ನಂತರ ಗಾಯಳುಗಳನ್ನು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು ತೀವ್ರವಾಗಿ ಗಾಯಗೊಂಡಿರುವ ನಾಗರಾಜ ಅನ್ನುವರನ್ನು ಕೋಲಾರದ ಆಸ್ಪತ್ರೆಗೆ ಕರೆದೊಯಿದಿದ್ದಾರೆ.
ಶ್ರೀನಿವಾಸ್ ಎಂಬುವರು ಶಾಲಾ ಜಮೀನು ಆರೋಪ ಇದ್ದು ಆತುರ ಆತುರವಾಗಿ ನರೇಗಾ ಯೋಜನೆಯಲ್ಲಿ ಅಕ್ರಮವಾಗಿ ಶಾಲಾ ಕಾಂಪೌಂಡ್ ನಿರ್ಮಾಣ ಮಾಡುವ ಮೂಲಕ ಒತ್ತುವರಿಯನ್ನು ಸಕ್ರಮ ಮಾಡಲು ಮುಂದಾಗಿದ್ದು ಇದಕ್ಕೆ ಗ್ರಾಮಸ್ಥರು ವಿರೋಧಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



