ಶ್ರೀನಿವಾಸಪುರ:ಸರ್ಕಾರಿ ಸೇವೆಯಿಂದ ನಿವೃತ್ತರಾದವರು ನೆಮ್ಮದಿಯ ಹಾಗು ಆರೋಗ್ಯವಂತರಾಗಿ ಜೀವನ ಮಾಡಲು ನಿಯಮಿತ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಬಹು ಸಹಕಾರಿಯಾಗುತ್ತದೆ ನಿರಂತರವಾಗಿ ಯೋಗಾಭ್ಯಾಸ ಮಾಡುವ ಮೂಲಕ ಉತ್ತಮ ಆರೋಗ್ಯ ಪಡೆಯುವಂತೆ ಯಲಹಂಕದ ವಿವೇಕಾನಂದ ಯೋಗ ಶಿಕ್ಷಣ ಕೇಂದ್ರದ ಮುಖ್ಯಸ್ಥ ಮಾದಪ್ಪ ಹೇಳಿದರು. ಅವರು ಶ್ರೀನಿವಾಸಪುರದ ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ಸಕ್ರೀಯ ಸದಸ್ಯ ಹಾಗು ಪಶು ವೈದ್ಯಾಧಿಕಾರಿ ಡಾ.ವೆಂಕಟೇಶ್ ತಮ್ಮ ಸರ್ಕಾರಿ ವೃತ್ತಿ ಜೀವನದಲ್ಲಿ ನಿವೃತ್ತರಾದ ಸಂದರ್ಭದಲ್ಲಿ ಡಾ.ವೆಂಕಟೇಶ್ ದಂಪತಿಯನ್ನು ಶ್ರೀನಿವಾಸಪುರದ ಶ್ರೀ ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ವತಿಯಿಂದ ಗೌರವಿಸಿದರು.
ಶ್ರೀ ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ಶಿಕ್ಷಕ ವೆಂಕಟೇಶ್ ಬಾಬು ಮಾತನಾಡಿ ಡಾ.ವೆಂಕಟೇಶ್ ರವರು ಪಶು ವೈದ್ಯಾಧಿಕಾರಿಗಳಾಗಿ ತಮ್ಮ ಸೇವಾ ಅವಧಿಯಲ್ಲಿ ಉತ್ತಮವಾಗಿ ಸೇವೆಯನ್ನು ಸಮಾಜ ಮೆಚ್ಚುವ ರಿತಿಯಲ್ಲಿ ನಿರ್ವಹಿಸಿದ್ದಾರೆ ಅವರು ಕೆಲಸ ಮಾಡಿದ ಗ್ರಾಮೀಣ ಭಾಗದಲ್ಲಿ ಜನರು ಅವರ ಸೇವೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾರೆ ಜನ ಮೆಚ್ಚಿದರೆ ಭಗವಂತ ಮೆಚ್ಚಿದಂತೆ ಅವರು ನಿವೃತ್ತಿ ಜೀವನ ಆರೋಗ್ಯ ಪೂರ್ಣವಾಗಿರಲಿ ಎಂದು ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ವತಿಯಿಂದ ಶುಭಹಾರೈಸಿದರು. ಇದೆ ಸಂದರ್ಭದಲ್ಲಿ ಕಾರ್ತೀಕ ಮಾಸದ ಮಹತ್ವ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳಾಗಿದ್ದ ಜಯರಾಮಪ್ಪ ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ರಂಗಪ್ಪಶೆಟ್ಟಿ ಪಾಲ್ಗೋಂಡಿದ್ದರು ಕಾರ್ಯಕ್ರಮದಲ್ಲಿ ಉಪನ್ಯಾಸಕ ಶಂಕರೇಗೌಡ ಶಿಕ್ಷಕ ಚಂದ್ರಣ್ಣ,ವಕೀಲ ವಿನಯಕುಮಾರ್, ಎಲ್.ಐ.ಸಿ ಶ್ರೀನಿವಾಸನ್ ಯೋಗ ಬಂಧುಗಳಾದ ಗೇಟ್ ಲಕ್ಷ್ಮಣರೆಡ್ಡಿ,ಮದ್ವೇಶ್,ವೆಂಕಟೇಶ್,ನಾರಾಯಣಸ್ವಾಮಿ,ಪ್ರಭಾಕರ್, ವಿನಯ್,ಮಂಜುಳ,ಭಾಗ್ಯಲಕ್ಷ್ಮೀ, ಜಯಮ್ಮ ಮುಂತಾದವರು ಇದ್ದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Wednesday, June 18