ಶ್ರೀನಿವಾಸಪುರ: ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ವಿದ್ಯಾರ್ಥಿ ದಸೆಯಲ್ಲಿ ಕಲಿಯುವ ಆಸಕ್ತಿ ವಹಿಸಿದರೆ ಭವಿಷ್ಯತ್ತಿನಲ್ಲಿ ಸಂಸ್ಕಾರವಂತ ಪ್ರಜೆಯಾಗಲು ಸಹಕಾರಿಯಾಗುತ್ತದೆ ಎಂದು ಶ್ರೀನಿವಾಸಪುರ ಸೆಂಟ್ರಲ್ನ ರೋಟರಿ ಅಧ್ಯಕ್ಷ ಹಾಗು ತಾ.ಪಂ ಮಾಜಿ ಸದಸ್ಯ ಮಂಜುನಾಥರೆಡ್ಡಿ ಹೇಳಿದರು.ಅವರು ತಾಲೂಕಿನ ಗಡಿಗ್ರಾಮವಾದ ಪಂಚಾಯಿತಿ ಮುಖ್ಯಕೇಂದ್ರ ಮುದಿಮೊಡಗು ಸರ್ಕಾರಿ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲಭಾಷ ನಿಘಂಟು ವಿತರಿಸಿ ಮಾತನಾಡಿದರು.
ಸೇವೆ ಅನ್ನುವ ಪದಕ್ಕೆ ಅಂತ್ಯ ಹಾಗು ವಿರಾಮ ಇರುವುದಿಲ್ಲ ಸಮಾಜದಲ್ಲಿ ಯಾವುದೇ ರೀತಿಯಲ್ಲೂ ಸೇವೆ ಒದಗಿಸುವ ಮೂಲಕ ಸಾಮಾಜಿಕ ಕಾಳಜಿ ಹೊಂದುವ ಮೂಲಕ ವಿದ್ಯಾರ್ಥಿಗಳು ಸೇವೆ ಕುರಿತು ಆಸಕ್ತರಾಗಬೇಕು,ಶಾಲೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭಗಳಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ರೋಟರಿ ಸಂಸ್ಥೆ ನೆರವಿಗೆ ಬರಲಿದೆ ಎಂದರು.
ರೋಟರಿ ಶ್ರೀನಿವಾಸಪುರ ಸೆಂಟ್ರಲ್ನ ಕಾರ್ಯದರ್ಶಿ ಹಾಗು ಶಿಕ್ಷಕ ಶಿವಮೂರ್ತಿ ಮಾತನಾಡಿ ಆಂಧ್ರದ ಗಡಿಭಾಗದ ಗ್ರಾಮಗಳ ವಿದ್ಯಾರ್ಥಿಗಳಿಗೆ ಭಾಷ ಸುಲಲಿತವಾಗಿ ಮಾತನಾಡಲು ಕಲಿಯಲು ಇಂಗ್ಲೀಷ್ ನಿಘಂಟು ಪ್ರಯೋಜನವಾಗುತ್ತದೆ ಇದರಿಂದಾಗಿ ಶ್ರೀನಿವಾಸಪುರ ಸೆಂಟ್ರಲ್ ರೋಟರಿ ವತಿಯಿಂದ ನೀಡಿರುವ ಉಚಿತವಾಗಿ ನಿಘಂಟುಗಳನ್ನು ಗಡಿಭಾಗದ ಮುದಿಮೊಡಗು ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ ಎಂದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



