ಶ್ರೀನಿವಾಸಪುರ: ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ವಿದ್ಯಾರ್ಥಿ ದಸೆಯಲ್ಲಿ ಕಲಿಯುವ ಆಸಕ್ತಿ ವಹಿಸಿದರೆ ಭವಿಷ್ಯತ್ತಿನಲ್ಲಿ ಸಂಸ್ಕಾರವಂತ ಪ್ರಜೆಯಾಗಲು ಸಹಕಾರಿಯಾಗುತ್ತದೆ ಎಂದು ಶ್ರೀನಿವಾಸಪುರ ಸೆಂಟ್ರಲ್ನ ರೋಟರಿ ಅಧ್ಯಕ್ಷ ಹಾಗು ತಾ.ಪಂ ಮಾಜಿ ಸದಸ್ಯ ಮಂಜುನಾಥರೆಡ್ಡಿ ಹೇಳಿದರು.ಅವರು ತಾಲೂಕಿನ ಗಡಿಗ್ರಾಮವಾದ ಪಂಚಾಯಿತಿ ಮುಖ್ಯಕೇಂದ್ರ ಮುದಿಮೊಡಗು ಸರ್ಕಾರಿ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲಭಾಷ ನಿಘಂಟು ವಿತರಿಸಿ ಮಾತನಾಡಿದರು.
ಸೇವೆ ಅನ್ನುವ ಪದಕ್ಕೆ ಅಂತ್ಯ ಹಾಗು ವಿರಾಮ ಇರುವುದಿಲ್ಲ ಸಮಾಜದಲ್ಲಿ ಯಾವುದೇ ರೀತಿಯಲ್ಲೂ ಸೇವೆ ಒದಗಿಸುವ ಮೂಲಕ ಸಾಮಾಜಿಕ ಕಾಳಜಿ ಹೊಂದುವ ಮೂಲಕ ವಿದ್ಯಾರ್ಥಿಗಳು ಸೇವೆ ಕುರಿತು ಆಸಕ್ತರಾಗಬೇಕು,ಶಾಲೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭಗಳಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ರೋಟರಿ ಸಂಸ್ಥೆ ನೆರವಿಗೆ ಬರಲಿದೆ ಎಂದರು.
ರೋಟರಿ ಶ್ರೀನಿವಾಸಪುರ ಸೆಂಟ್ರಲ್ನ ಕಾರ್ಯದರ್ಶಿ ಹಾಗು ಶಿಕ್ಷಕ ಶಿವಮೂರ್ತಿ ಮಾತನಾಡಿ ಆಂಧ್ರದ ಗಡಿಭಾಗದ ಗ್ರಾಮಗಳ ವಿದ್ಯಾರ್ಥಿಗಳಿಗೆ ಭಾಷ ಸುಲಲಿತವಾಗಿ ಮಾತನಾಡಲು ಕಲಿಯಲು ಇಂಗ್ಲೀಷ್ ನಿಘಂಟು ಪ್ರಯೋಜನವಾಗುತ್ತದೆ ಇದರಿಂದಾಗಿ ಶ್ರೀನಿವಾಸಪುರ ಸೆಂಟ್ರಲ್ ರೋಟರಿ ವತಿಯಿಂದ ನೀಡಿರುವ ಉಚಿತವಾಗಿ ನಿಘಂಟುಗಳನ್ನು ಗಡಿಭಾಗದ ಮುದಿಮೊಡಗು ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ ಎಂದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



