ಶ್ರೀನಿವಾಸಪುರ: ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ವಿದ್ಯಾರ್ಥಿ ದಸೆಯಲ್ಲಿ ಕಲಿಯುವ ಆಸಕ್ತಿ ವಹಿಸಿದರೆ ಭವಿಷ್ಯತ್ತಿನಲ್ಲಿ ಸಂಸ್ಕಾರವಂತ ಪ್ರಜೆಯಾಗಲು ಸಹಕಾರಿಯಾಗುತ್ತದೆ ಎಂದು ಶ್ರೀನಿವಾಸಪುರ ಸೆಂಟ್ರಲ್ನ ರೋಟರಿ ಅಧ್ಯಕ್ಷ ಹಾಗು ತಾ.ಪಂ ಮಾಜಿ ಸದಸ್ಯ ಮಂಜುನಾಥರೆಡ್ಡಿ ಹೇಳಿದರು.ಅವರು ತಾಲೂಕಿನ ಗಡಿಗ್ರಾಮವಾದ ಪಂಚಾಯಿತಿ ಮುಖ್ಯಕೇಂದ್ರ ಮುದಿಮೊಡಗು ಸರ್ಕಾರಿ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲಭಾಷ ನಿಘಂಟು ವಿತರಿಸಿ ಮಾತನಾಡಿದರು.
ಸೇವೆ ಅನ್ನುವ ಪದಕ್ಕೆ ಅಂತ್ಯ ಹಾಗು ವಿರಾಮ ಇರುವುದಿಲ್ಲ ಸಮಾಜದಲ್ಲಿ ಯಾವುದೇ ರೀತಿಯಲ್ಲೂ ಸೇವೆ ಒದಗಿಸುವ ಮೂಲಕ ಸಾಮಾಜಿಕ ಕಾಳಜಿ ಹೊಂದುವ ಮೂಲಕ ವಿದ್ಯಾರ್ಥಿಗಳು ಸೇವೆ ಕುರಿತು ಆಸಕ್ತರಾಗಬೇಕು,ಶಾಲೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭಗಳಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ರೋಟರಿ ಸಂಸ್ಥೆ ನೆರವಿಗೆ ಬರಲಿದೆ ಎಂದರು.
ರೋಟರಿ ಶ್ರೀನಿವಾಸಪುರ ಸೆಂಟ್ರಲ್ನ ಕಾರ್ಯದರ್ಶಿ ಹಾಗು ಶಿಕ್ಷಕ ಶಿವಮೂರ್ತಿ ಮಾತನಾಡಿ ಆಂಧ್ರದ ಗಡಿಭಾಗದ ಗ್ರಾಮಗಳ ವಿದ್ಯಾರ್ಥಿಗಳಿಗೆ ಭಾಷ ಸುಲಲಿತವಾಗಿ ಮಾತನಾಡಲು ಕಲಿಯಲು ಇಂಗ್ಲೀಷ್ ನಿಘಂಟು ಪ್ರಯೋಜನವಾಗುತ್ತದೆ ಇದರಿಂದಾಗಿ ಶ್ರೀನಿವಾಸಪುರ ಸೆಂಟ್ರಲ್ ರೋಟರಿ ವತಿಯಿಂದ ನೀಡಿರುವ ಉಚಿತವಾಗಿ ನಿಘಂಟುಗಳನ್ನು ಗಡಿಭಾಗದ ಮುದಿಮೊಡಗು ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ ಎಂದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28