ಶ್ರೀನಿವಾಸಪುರ: ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ವಿದ್ಯಾರ್ಥಿ ದಸೆಯಲ್ಲಿ ಕಲಿಯುವ ಆಸಕ್ತಿ ವಹಿಸಿದರೆ ಭವಿಷ್ಯತ್ತಿನಲ್ಲಿ ಸಂಸ್ಕಾರವಂತ ಪ್ರಜೆಯಾಗಲು ಸಹಕಾರಿಯಾಗುತ್ತದೆ ಎಂದು ಶ್ರೀನಿವಾಸಪುರ ಸೆಂಟ್ರಲ್ನ ರೋಟರಿ ಅಧ್ಯಕ್ಷ ಹಾಗು ತಾ.ಪಂ ಮಾಜಿ ಸದಸ್ಯ ಮಂಜುನಾಥರೆಡ್ಡಿ ಹೇಳಿದರು.ಅವರು ತಾಲೂಕಿನ ಗಡಿಗ್ರಾಮವಾದ ಪಂಚಾಯಿತಿ ಮುಖ್ಯಕೇಂದ್ರ ಮುದಿಮೊಡಗು ಸರ್ಕಾರಿ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲಭಾಷ ನಿಘಂಟು ವಿತರಿಸಿ ಮಾತನಾಡಿದರು.
ಸೇವೆ ಅನ್ನುವ ಪದಕ್ಕೆ ಅಂತ್ಯ ಹಾಗು ವಿರಾಮ ಇರುವುದಿಲ್ಲ ಸಮಾಜದಲ್ಲಿ ಯಾವುದೇ ರೀತಿಯಲ್ಲೂ ಸೇವೆ ಒದಗಿಸುವ ಮೂಲಕ ಸಾಮಾಜಿಕ ಕಾಳಜಿ ಹೊಂದುವ ಮೂಲಕ ವಿದ್ಯಾರ್ಥಿಗಳು ಸೇವೆ ಕುರಿತು ಆಸಕ್ತರಾಗಬೇಕು,ಶಾಲೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭಗಳಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ರೋಟರಿ ಸಂಸ್ಥೆ ನೆರವಿಗೆ ಬರಲಿದೆ ಎಂದರು.
ರೋಟರಿ ಶ್ರೀನಿವಾಸಪುರ ಸೆಂಟ್ರಲ್ನ ಕಾರ್ಯದರ್ಶಿ ಹಾಗು ಶಿಕ್ಷಕ ಶಿವಮೂರ್ತಿ ಮಾತನಾಡಿ ಆಂಧ್ರದ ಗಡಿಭಾಗದ ಗ್ರಾಮಗಳ ವಿದ್ಯಾರ್ಥಿಗಳಿಗೆ ಭಾಷ ಸುಲಲಿತವಾಗಿ ಮಾತನಾಡಲು ಕಲಿಯಲು ಇಂಗ್ಲೀಷ್ ನಿಘಂಟು ಪ್ರಯೋಜನವಾಗುತ್ತದೆ ಇದರಿಂದಾಗಿ ಶ್ರೀನಿವಾಸಪುರ ಸೆಂಟ್ರಲ್ ರೋಟರಿ ವತಿಯಿಂದ ನೀಡಿರುವ ಉಚಿತವಾಗಿ ನಿಘಂಟುಗಳನ್ನು ಗಡಿಭಾಗದ ಮುದಿಮೊಡಗು ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ ಎಂದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



