ಶ್ರೀನಿವಾಸಪುರ:ಕೋಲಾರ,ಬೆಂಗಳೂರು ಗ್ರಾಮಾಂತರ,ಹಾಸನ, ಮಂಡ್ಯ,ತುಮಕೂರು, 5+23 ಸೀಟು ಹಂಚಿಕೆಯ ಸೂತ್ರದ ಅಡಿಯಲ್ಲಿ ವನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಬಹುತೇಕ ಫೈನಲ್ ಎನ್ನುವ ಮಾತು ಕೇಳಿಬರುತ್ತಿದೆ.
ಜೆಡಿಎಸ್ ಭದ್ರಕೋಟೆಯಾಗಿರುವ ಕೋಲಾರ ಮೀಸಲು ಕ್ಷೇತ್ರ ಸೇರಿದಂತೆ ಮಂಡ್ಯ, ಬೆಂಗಳೂರು ಗ್ರಾಮಾಂತರ, ಹಾಸನ,ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳಲ್ಲಿ ತನ್ನ ಸಾಂಪ್ರದಾಯಿಕ ಪ್ರಾಭಲ್ಯ ಹೊಂದಿರುವ ಜೆಡಿಎಸ್ ಐದು ಕ್ಷೇತ್ರಗಳನ್ನು ಉಳಸಿಕೊಳ್ಳಲು ಜೆಡಿಎಸ್ ಶತಾಯಗತಾಯ ಪ್ರಯತ್ನ ನಡೆಸಿ ಅದನ್ನು ಮೈತ್ರಿ ಧರ್ಮದಲ್ಲಿ ಬಿಜೆಪಿ ವರಿಷ್ಟರ ಬಳಿ ಕೇಳಿತ್ತು ಅದರಂತೆ ರಾಜ್ಯ ಬಿಜೆಪಿ ನಾಯಕರ ಅಭಿಪ್ರಾಯವನ್ನು ಪಡೆದಂತ ಬಿಜೆಪಿ ವರಿಷ್ಠರು, ಕೇಂದ್ರ ಗೃಹಮಂತ್ರಿ ಅಮಿತ್ ಷಾ ಗಮನಕ್ಕೆ ತಂದಿದ್ದರು ಅದರಂತೆ ಅಮಿತ್ ಷಾ ತಾವೆ ಆಸಕ್ತಿ ತೋರಿ ದೆಹಲಿಯ ಪೊಲಿಟಿಕಲ್ ಅನಾಲಿಸ್ಟ ತಂಡದ ಕೈಯಲ್ಲಿ ಸರ್ವೆ ಮಾಡಿಸಿದ್ದು ಒಂದು ತಿಂಗಳ ಅವಧಿಯಲ್ಲಿ ಮಾಡಿಸಿರುವ ಸರ್ವೆಯಲ್ಲಿ ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಅನಕೂಲಕರವಾದ ವಾತವರಣ ಇದೆ ಎನ್ನವ ಮಾಹಿತಿ ಲಭ್ಯವಾಗಿದಿಯಂತೆ,ಸರ್ವೆ ವರದಿಯಂತೆ ಐದು ಕ್ಷೇತ್ರಗಳನ್ನು ಜೆಡಿಎಸ್ ಗೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಹೊರ ಬಿದಿದ್ದೆ.ಬೆಂಗಳೂರು ಗ್ರಾಮಾಂತರ ಅಥಾವ ಮಂಡ್ಯದಲ್ಲಿ ಸ್ವತಃ ಕುಮಾರಸ್ವಾಮಿ ನಿಲ್ಲುವ ಕುರಿತಂತೆ ಬಿಜೆಪಿ ಸರ್ವೆಯಲ್ಲಿ ಪಾಸಿಟಿವ್ ರಿಸಲ್ಟ್ ಬಂದಿರುವ ಬಗ್ಗೆ ಹೇಳಲಾಗುತ್ತಿದೆ.
ಮುಳಬಾಗಿಲು ಶಾಸಕ ಲೋಕಸಭಾ ಚುನಾವಣಾ ಅಕಾಂಕ್ಷಿ.
ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ದಿಸಲು ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿಮಂಜುನಾಥ್ ಆಸಕ್ತಿ ತೋರಿದ್ದಾರೆ ಈ ಕುರಿತಂತೆ ತಮ್ಮ ನಿಲವನ್ನು ಜೆಡಿಎಸ್ ವರಿಷ್ಟರ ಮುಂದೆ ವ್ಯಕ್ತಪಡಿಸಿದ್ದು, ಮೂರು ದಿನಗಳ ಹಿಂದೆ ಚಿಂತಾಮಣಿಯ ಮಾಜಿ ಶಾಸಕ ಕೃಷ್ಣಾರೆಡ್ಡಿ ಮನೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ತಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ದಿಸುವ ಬಗ್ಗೆ ಮಾಧ್ಯಮದವರ ಮುಂದೆ ಬಹಿರಂಗ ಪಡಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



