ಚಿಂತಾಮಣಿ:ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಬರುವಂತ ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಕಾರ್ಯರಂಭ ಆಗುವ ಸೂಚನೆ ಕಂಡುಬರುತ್ತಿದೆ.ರಾಜ್ಯದ ಉನ್ನತ ಶಿಕ್ಷಣ ಸಚಿವರು ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ ಸಚಿವ ಹಾಗು ಚಿಂತಾಮಣಿ ಶಾಸಕ ಡಾ.ಎಂ.ಸಿ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದು ಆರಂಭಿಕವಾಗಿ ಖಾಸಗಿ ಕಟ್ಟಡದಲ್ಲಿ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಆರಂಭವಾಗಲಿದೆ ಎನ್ನುವ ಮಾತು ದಟ್ಟವಾಗಿ ಕೇಳಿಬರುತ್ತಿದ್ದು ಮುಂದಿನ ಜುನ್ ಜುಲೈ ತಿಂಗಳಲ್ಲಿ ದಾಖಲಾತಿಗಳು ಪ್ರಾರಂಭವಾಗಿ ದಿನಗಳಲ್ಲಿ ಕಾಲೇಜಿನ ತರಗತಿಗಳು ಶುರುವಾಗಲಿದೆ ಎನ್ನವಮಾತು ಕೇಳಿಬರುತ್ತಿದೆ.
ಸಚಿವ ಡಾ.ಸುಧಾಕರ್ ಹೇಳಿರುವಂತೆ ಚಿಂತಾಮಣಿ ನಗರದ ಬೆಂಗಳೂರು ರಸ್ತೆಯಲ್ಲಿ ಯಾದವ ಹಾಸ್ಟಲ್ ಬಳಿ ಸುಮಾರು ಹತ್ತು ಎಕರೆ ಜಾಗವನ್ನು ಇಂಜನಿಯರಿಂಗ್ ಕಾಲೇಜು ನಿರ್ಮಿಸಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗೆ ಮಂಜೂರು ಮಾಡಿದ್ದು ಆರಂಭಿಕ 70 ಕೋಟಿ ಅಂದಾಜು ವೆಚ್ಚದಲ್ಲಿ ಎಂಜಿನಿಯರಿಂಗ್ ಕಾಲೇಜನ್ನು ನಿರ್ಮಿಸುವ ಬಗ್ಗೆ ತಿಳಿಸಿದ್ದಾರೆ, ಕಾಲೇಜು ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಅದರಲ್ಲೂ ವೃತ್ತಿ ಪರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದಿರುತ್ತಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



