ಶ್ರೀನಿವಾಸಪುರ:ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಗ್ರಾಮದಲ್ಲಿ ಕಟ್ಟಿದ್ದ ಕೇಸರಿ ಧ್ವಜ,ಫ್ಲೆಕ್ಸ್ ಬಂಟಿಕ್ಸ್ ಗಳನ್ನು ಪಂಚಾಯತಿ ಸಿಬ್ಬಂದಿ ತೆರವು ಗೊಳಿಸಿ ಅವುಗಳನ್ನು ಗ್ರಾಮದ ಸ್ಮಶಾನದಲ್ಲಿ ಎಸೆದು ಉದ್ದಟತನ ಮೆರೆದಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಗ್ರಾಮದ ಮನೆಗಳ ಮೇಲೆ ಕಟ್ಟಿದ್ದ ಕೇಸರಿ ಧ್ವಜ ರಾಮನ ಭಾವಚಿತ್ರದ ಪ್ಲೆಕ್ಸ್ಗಳನ್ನು ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಶನಿವಾರ ತರಾತುರಿಯಲ್ಲಿ ತೆರವು ಮಾಡಿದ ಪಂಚಾಯಿತಿ ಸಿಬ್ಬಂದಿ ಸ್ಮಶಾನಕ್ಕೆ ಎಸೆದಿದ್ದಾರೆ ಎಂದು ತಾಲೂಕಿನ ಅಡ್ಡಗಲ್ ಪಂಚಾಯತಿ ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮದಲ್ಲಿ ಕೇಸರಿ ಧ್ವಜ,ಫ್ಲೆಕ್ಸ್ ಬಂಟಿಕ್ಸ್ ತೆರವು ವಿಚಾರ ರಾದ್ದಾಂತವಾಗುತ್ತಿದ್ದಂತೆ ಗೌವನಪಲ್ಲಿ ಠಾಣ ಪೋಲಿಸರು ತಕ್ಷಣ ಗ್ರಾಮಕ್ಕೆ ಆಗಮಿಸಿ ಪಂಚಾಯಿತಿ ಅಧಿಕಾರಿ ಹಾಗು ಸಿಬ್ಬಂದಿ ಮತ್ತು ಸಾರ್ವಜನಿಕರನ್ನು ಕೂರಿಸಿ ಮಾತನಾಡಿ ಸ್ಮಶಾನಕ್ಕೆ ಎಸೆದಿದ್ದ ಧ್ವಜ,ಫ್ಲೆಕ್ಸ್ ಬಂಟಿಕ್ಸ್ ಗಳನ್ನು ಅಲ್ಲಿಂದ ತೆರವು ಮಾಡಿ ಗ್ರಾಮಸ್ಥರ ಸಲಹೆಯಂತೆ ನೀರಿನಲ್ಲಿ ವಿಸರ್ಜಿಸಲು ಸೂಚಿಸಿದ್ದಾಗಿ ಪೋಲಿಸರು ಹೇಳುತ್ತಾರೆ.
ತೆರುವಿಗೆ ಎರಡು ತಿಂಗಳು ಬೇಕಾಯಿತ?
ಇವುಗಳನ್ನು ತೆರವು ಮಾಡಲು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಎರಡು ತಿಂಗಳು ಬೇಕಾಯಿತ ಎಂದು ಪ್ರಶ್ನಿಸುವ ಗ್ರಾಮದ ಯುವಕರು ಇದು ಇಲ್ಲಿನ ಪಂಚಾಯಿತಿ ಅಧಿಕಾರಿ ಹಾಗು ಸಿಬ್ಬಂದಿ ಬೇಜವಬ್ದಾರಿ ನಡವಳಿಕೆಯ ಪರಿಣಾಮ ಗ್ರಾಮದಲ್ಲಿ ಸೌಹಾರ್ದತೆಗೆ ಧಕ್ಕೆ ಉಂಟುಮಾಡುವಂತಿದೆ ಎನ್ನುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



