ಶ್ರೀನಿವಾಸಪುರ:ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಗ್ರಾಮದಲ್ಲಿ ಕಟ್ಟಿದ್ದ ಕೇಸರಿ ಧ್ವಜ,ಫ್ಲೆಕ್ಸ್ ಬಂಟಿಕ್ಸ್ ಗಳನ್ನು ಪಂಚಾಯತಿ ಸಿಬ್ಬಂದಿ ತೆರವು ಗೊಳಿಸಿ ಅವುಗಳನ್ನು ಗ್ರಾಮದ ಸ್ಮಶಾನದಲ್ಲಿ ಎಸೆದು ಉದ್ದಟತನ ಮೆರೆದಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಗ್ರಾಮದ ಮನೆಗಳ ಮೇಲೆ ಕಟ್ಟಿದ್ದ ಕೇಸರಿ ಧ್ವಜ ರಾಮನ ಭಾವಚಿತ್ರದ ಪ್ಲೆಕ್ಸ್ಗಳನ್ನು ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಶನಿವಾರ ತರಾತುರಿಯಲ್ಲಿ ತೆರವು ಮಾಡಿದ ಪಂಚಾಯಿತಿ ಸಿಬ್ಬಂದಿ ಸ್ಮಶಾನಕ್ಕೆ ಎಸೆದಿದ್ದಾರೆ ಎಂದು ತಾಲೂಕಿನ ಅಡ್ಡಗಲ್ ಪಂಚಾಯತಿ ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮದಲ್ಲಿ ಕೇಸರಿ ಧ್ವಜ,ಫ್ಲೆಕ್ಸ್ ಬಂಟಿಕ್ಸ್ ತೆರವು ವಿಚಾರ ರಾದ್ದಾಂತವಾಗುತ್ತಿದ್ದಂತೆ ಗೌವನಪಲ್ಲಿ ಠಾಣ ಪೋಲಿಸರು ತಕ್ಷಣ ಗ್ರಾಮಕ್ಕೆ ಆಗಮಿಸಿ ಪಂಚಾಯಿತಿ ಅಧಿಕಾರಿ ಹಾಗು ಸಿಬ್ಬಂದಿ ಮತ್ತು ಸಾರ್ವಜನಿಕರನ್ನು ಕೂರಿಸಿ ಮಾತನಾಡಿ ಸ್ಮಶಾನಕ್ಕೆ ಎಸೆದಿದ್ದ ಧ್ವಜ,ಫ್ಲೆಕ್ಸ್ ಬಂಟಿಕ್ಸ್ ಗಳನ್ನು ಅಲ್ಲಿಂದ ತೆರವು ಮಾಡಿ ಗ್ರಾಮಸ್ಥರ ಸಲಹೆಯಂತೆ ನೀರಿನಲ್ಲಿ ವಿಸರ್ಜಿಸಲು ಸೂಚಿಸಿದ್ದಾಗಿ ಪೋಲಿಸರು ಹೇಳುತ್ತಾರೆ.
ತೆರುವಿಗೆ ಎರಡು ತಿಂಗಳು ಬೇಕಾಯಿತ?
ಇವುಗಳನ್ನು ತೆರವು ಮಾಡಲು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಎರಡು ತಿಂಗಳು ಬೇಕಾಯಿತ ಎಂದು ಪ್ರಶ್ನಿಸುವ ಗ್ರಾಮದ ಯುವಕರು ಇದು ಇಲ್ಲಿನ ಪಂಚಾಯಿತಿ ಅಧಿಕಾರಿ ಹಾಗು ಸಿಬ್ಬಂದಿ ಬೇಜವಬ್ದಾರಿ ನಡವಳಿಕೆಯ ಪರಿಣಾಮ ಗ್ರಾಮದಲ್ಲಿ ಸೌಹಾರ್ದತೆಗೆ ಧಕ್ಕೆ ಉಂಟುಮಾಡುವಂತಿದೆ ಎನ್ನುತ್ತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



