ಶ್ರೀನಿವಾಸಪುರ: ಕಾಂಗ್ರೆಸ್ ಮುಖಂಡ ದಲಿತ ನಾಯಕ ಶ್ರೀನಿವಾಸನ್ ಕೊಲೆ ಆರೋಪದಲ್ಲಿ ಬಂದಿತರಾಗಿರುವಂತ ವ್ಯಕ್ತಿಗಳ ಸಂಬಂಧಿಕರು ಜಗಜೀವನ ಪಾಳ್ಯದಲ್ಲಿ ನಮ್ಮೊಂದಿಗೆ ವಾಸಿಸುವುದು ಬೇಡ ಎಂದು ಜಗಜೀವನ ಪಾಳ್ಯ ಮತ್ತು ದಯಾನಂದ ರಸ್ತೆ ನಿವಾಸಿಗರು ಪೋಲಿಸರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿರುತ್ತಾರೆ.
ಶ್ರೀನಿವಾಸನ್ ಅವರ ಕೊಲೆ ಆರೋಪದಲ್ಲಿ ಬಂದಿತರಾಗಿರುವ ವ್ಯಕ್ತಿಗಳ ಕುಟುಂಬಗಳ ಸದಸ್ಯರು ಹಾಗು ಬಂಧುಗಳು ಕೊಲೆಯಾದ ನಂತರದಲ್ಲಿ ಪರಾರಿಯಾಗಿದ್ದರು ದಿನಗಳದಂತೆ ಇತ್ತಿಚಿಗೆ ಕೆಲವರು ಒಬ್ಬೊಬ್ಬರಾಗಿ ಬರುತ್ತಿದ್ದು ಅವರಿಂದ ವಾರ್ಡ್ ನಂ 20 ರ ಜಗಜೀವನ ಪಾಳ್ಯ ಮತ್ತು ದಯಾನಂದ ರಸ್ತೆಯ ಜನರ ನಡುವೆ ಸೌಹಾರ್ದತೆ ಕದಡುತ್ತದೆ ಮತ್ತು ಕೊಲೆ ಕುರಿತಂತೆ ಪ್ರತ್ಯಕ್ಷ ಸಾಕ್ಷಿ ಗಳಿಗೆ ಮತ್ತು ಅವರ ಸಂಬಂಧಿಕರಿಗೆ ಅಪಾಯ ಆಗುವಂತ ಆತಂಕದ ಪರಿಸ್ಥಿತಿ ಏರ್ಪಡುತ್ತಿದ್ದು ಕೊಲೆ ಆರೋಪಿಯ ಸಂಬಂದಿಕರು ಜಗಜೀವನ ಪಾಳ್ಯ ಹಾಗೂ ದಯಾನಂದ ಭಾಗದಲ್ಲಿ ಬರುವುದು ಒಡಾಡುವುದು ಬೇಡ ಮತ್ತು ಅವರು ಇಲ್ಲಿ ಇರಲು ಅವಕಾಶ ಮಾಡಿಕೊಡಬಾರದು ಈ ಬಗ್ಗೆ ಪೋಲಿಸರು ಮದ್ಯಸ್ಥಿಕೆ ವಹಿಸಿ ಅವರಿಗೆ ತಿಳುವಳಿಕೆ ಮೂಡಿಸಬೇಕು ಎಂದು ಒತ್ತಾಯಿಸಿ ಶ್ರೀನಿವಾಸಪುರ ಪಟ್ಟಣದ ಪೊಲೀಸ್ ಠಾಣೆಯ ಮುಂದೆ ವಾರ್ಡ್ ನಂ 20 ಭಾಗದ ನಿವಾಸಿಗಳು ಮನವಿ ಪತ್ರವನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ವಾರ್ಡ್ ನಿವಾಸಿಗಳಾದ ಅಮರ್, ರಾಜೇಶ್, ಸುಬ್ರಮಣಿ, ಚೆನ್ನಪ್ಪ, ಮುಳಿಯಗಳಪ್ಪ, ತಿಪ್ಪಣ್ಣ, ನಾಗರಾಜ, ನಾಗೇಶ್, ಅಂಬರೀಶ್, ಪದ್ಮ, ರೂಪಶ್ರೀ,ಮಣಿಮಾಲ,ಸೀತಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



