ಶ್ರೀನಿವಾಸಪುರ:ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಸವಾರರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಕಮತಂಪಲ್ಲಿ ಕ್ರಾಸ್ ನಲ್ಲಿ ನಡೆದಿರುತ್ತದೆ.
ತಾಲೂಕಿನ ಕಡಪ- ಬೆಂಗಳೂರು ಹೆದ್ದಾರಿಯಲ್ಲಿ ತಾಡಿಗೋಳ್ ನಂತರದ ಕಮತಂಪಲ್ಲಿ ಕ್ರಾಸ್ ನಲ್ಲಿ ನಡೆದಿರುವ ಅಪಘಾತ ನಡೆದಿದ್ದು ಮೃತ ದುರ್ದೈವಿಗಳನ್ನು ತಾ.ಬೈರಗಾನಪಲ್ಲಿ ಗ್ರಾಮದ ಗೋಪಾಲಪ್ಪ(58) ಹಾಗು ಚಿಂತಾಮಣಿ ತಾ.ಕೊನಪ್ಪಲ್ಲಿ ನಿವಾಸಿ ವೆಂಕಟೇಶ್ (45) ಎಂದು ಗುರುತಿಸಲಾಗಿದೆ.ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿರುತ್ತದೆ.
ಬೆಂಗಳೂರು ನೊಂದಣಿ ಹೊಂದಿರುವ ಮಾರುತಿ ಎಸ್ ಕ್ರಾಸ್ ಹೈಬ್ರಿಡ್ ನಿಲಿ ಬಣ್ಣದ ಕಾರು ಚಿಂತಾಮಣಿ ಕಡೆಗೆ ವೇಗವಾಗಿ ಹೋಗುತಿದ್ದು ಚಾಲಕನ ನಿಯಂತ್ರಣ ತಪ್ಪಿ ಚಿಂತಾಮಣಿಯಲ್ಲಿ ಸಂತೆ ಮುಗಿಸಿ ಬೈರಗಾನಪಲ್ಲಿಗೆ ಹೋರಟಿದ್ದ ಇಬ್ಬರಿದ್ದ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ಅಪಘಾತ ನಡೆದಿದೆ ಎನ್ನುಲಾಗಿದ್ದು, ಡಿಕ್ಕಿಯಾದ ರಭಸಕ್ಕೆ ಕಾರು ಮತ್ತು ಸವಾರರ ಸಮೇತ ದ್ವಿಚಕ್ರ ವಾಹನ ಸುಮಾರು 15 ಅಡಿಗಳ ಆಳದ ಕಂದಕಕ್ಕೆ ಬಿದ್ದಿದ್ದು ಹಳ್ಳದಲ್ಲಿದ್ದ ಕಲ್ಲು ಬಂಡೆಗಳಿಗೆ ಬಡಿದು ದ್ವಿಚಕ್ರ ಸವಾರರು ಸ್ಥಳದ್ಲ್ಲೆ ಮೃತಪಟ್ಟಿರುತ್ತಾರೆ.
ರಸ್ತೆ ಮಾರ್ಗ ಸೂಚಿ ಇಲ್ಲದ್ದೆ ಅಪಘಾತಕ್ಕೆ ಕಾರಣ!
ಚಿಂತಾಮಣಿಯ ಮಾಡಿಕೆರೆ ಕ್ರಾಸ್ ನಿಂದ ಆಂಧ್ರದ ಗಡಿಯಂಚಿನ ವರಿಗೂ ಕರ್ನಾಟಕ ಸರ್ಕಾರದ ಕೆ ಶಿಪ್ ರಸ್ತೆ ನಿರ್ಮಾಣವಾಗುತ್ತಿದೆ ರಸ್ತೆ ನಿರ್ಮಾಣದ ಗುತ್ತಿಗೆದಾರ ಸಂಸ್ಥೆ ಅಪಘಾತ ಆಗಿರುವ ಜಾಗದಲ್ಲಿ ತಿರುವು ಇರುವ ಬಗ್ಗೆ ಹಾಗು ಕಂದಕ ಇರುವ ಬಗ್ಗೆ ಮಾರ್ಗ ಸೂಚಿ ಅಳವಡಿಸದೆ ಇರುವುದರಿಂದ ಅಪಘಾತ ನಡೆದಿದೆ ಎನ್ನುತ್ತಾರೆ ಸ್ಥಳಿಯರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



