ಶ್ರೀನಿವಾಸಪುರ: ಮಾನಸೀಕವಾಗಿ ಮನನೊಂದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಹೋಬಳಿ ಶಿಗಪಲ್ಲಿ@ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನು ನೇಣಿಗೆ ಶರಣಾದ ತಂದೆಯೊಬ್ಬನ ಕಥೆ,ಕೃಷಿ ಕಾರ್ಮಿಕನಾಗಿದ್ದ ಶಿಗಪಲ್ಲಿ ನಾರಾಯಣಸ್ವಾಮಿ (40) ಹೆಂಡತಿ ಹಾಗು ಇಬ್ಬರು ಮಕ್ಕಳೊಂದಿಗೆ ಗ್ರಾಮದಲ್ಲಿಯೇ ವಾಸವಾಗಿದ್ದ ಇತ್ತಿಚಿಗೆ ಗಂಡ ಹೆಂಡತಿ ನಡುವೆ ಅನ್ಯೊನ್ಯತೆ ಕಡಿಮೆಯಾಗಿ ಪತ್ನಿ ಕಾಣೆಯಾಗುತ್ತಾಳೆ, ಈ ಬಗ್ಗೆ ಗ್ರಾಮದಲ್ಲಿ ಹಲವಾರು ಉಹಾಪೋಹಗಳು ಹರಡುತ್ತವೆ,ನಂತರದ ಬೆಳವಣಿಗೆಯಲ್ಲಿ ಆಕೆ ಕೋಲಾರದ ಬಳಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿರುವುದಾಗಿ ಹೇಳುತ್ತಾರೆ,ಇತ್ತ ನಾರಯಣಸ್ವಾಮಿ ಬಗ್ಗೆ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಹಳೆಯ ಪ್ರಕರಣಕ್ಕೆ ಸಂಬಂದಿಸಿದಂತೆ ದೂರು ಇದ್ದು ಪೋಲಿಸರು ಕರೆದಾಗ ಠಾಣೆಗೆ ಹೋಗಿಬರುತ್ತಿದ್ದ, ಹೀಗೆ ಹಲವಾರು ರಿತಿಯಲ್ಲಿ ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದ ಆತ ತನ್ನ ಇಬ್ಬರು ಮಕ್ಕಳಾದ ಪವನ್ (12) ಮತ್ತು ನಿತಿನ್ (10) ವಿಷ ಕುಡಿಸಿ ತಾನು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸುತ್ತಾರೆ.
ಈ ಸಂಬಂಧ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಇನ್ಸಪೇಕ್ಟರ್ ಗೊರವನಕೊಳ್ಳ ಭೇಟಿ ನೀಡಿರುತ್ತಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Monday, June 16