ಶ್ರೀನಿವಾಸಪುರ:ತಾಲೂಕಿನ ಯಲ್ದೂರಿನಲ್ಲಿ ಶ್ರದ್ಧಾ ಭಕ್ತಿಯಿಂದ ಗಂಗಮ್ಮ ಜಾತ್ರೆಯ ದೀಪೋತ್ಸವ ನಡೆಸಲಾಯಿತು,ಗ್ರಾಮದ ಶಕ್ತಿ ದೇವತೆಗಳ ದೇವಾಲಯಗಳಲ್ಲಿ ದೀಪೋತ್ಸವ ಕಾರ್ಯಕ್ರಮ ಆಯೋಜಿಸಿ ನಂತರ ಗಂಗಮ್ಮ ದೇವಾಲಯದ ಪೂಜಾರಿ ದೀಪ ಹೋತ್ತು ದೇವಾಲಯ ಸುತ್ತುತ್ತಾರೆ. ಯಲ್ದೂರು ನಡುಬಿದಿಯಲ್ಲಿರುವ ಗಂಗಮ್ಮ ದೇವಾಲಯದಲ್ಲಿ ಆನಾದಿಕಾಲದಿಂದಲೂ ಗ್ರಾಮದ ಆಚಾರದಂತೆ ಹೊಸ ಸಂವತ್ಸರ ಯುಗಾದಿ ನಂತರ ಬರುವ ಮೊದಲ ಸೋಮವಾರ ಗಂಗಮ್ಮನ ಜಾತ್ರೆ ಆಚರಿಸಿಕೊಂಡು ಬರಲಾಗುತ್ತಿದೆ ಎನ್ನುತ್ತಾರೆ ಗ್ರಾಮಸ್ಥರು. ಗಂಗಜಾತ್ರೆ ಎಂದು ಆಚರಿಸುವ ಗಂಗಮ್ಮ ದೇವರ ಮೂಲಮೂರ್ತಿಗೆ ಅಭಿಷೇಕ ವಿವಿಧ ರೀತಿಯ ಬಣ್ಣದ ಹೂಗಳಿಂದ ಅಲಂಕಾರ ನೈವೇದ್ಯ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ಕಷ್ಟ ಇದೆ ನಿವಾರಿಸು ತಾಯಿ ಎಂದು ಗಂಗಮ್ಮ ನಲ್ಲಿ ನಿವೇದಿಸಿಕೊಂಡರೆ ಕಷ್ಟಗಳನ್ನು ಗಂಗಮ್ಮ ತಾಯಿ ನೀವಾರಿಸುತ್ತಾಳೆ ಎಂಬುದು ಇಲ್ಲಿನ ಜನರ ನಂಬಿಕೆ.
ಕಷ್ಟ ಇದೆ ನಿವಾರಿಸು ತಾಯಿ ಎಂದು ಗಂಗಮ್ಮ ನಲ್ಲಿ ನಿವೇದಿಸಿಕೊಂಡರೆ ಕಷ್ಟಗಳನ್ನು ಗಂಗಮ್ಮ ತಾಯಿ ನೀವಾರಿಸುತ್ತಾಳೆ ಎಂಬುದು ಇಲ್ಲಿನ ಜನರ ನಂಬಿಕೆ.ಉತ್ತಮ ಮಳೆ ಬೆಳೆಯಾಗುತ್ತದೆ,ಗ್ರಾಮದ ಜನರನ್ನು ಸುರಕ್ಷತೆಯಿಂದ ಕಾಪಾಡುತ್ತಾಳೆ ಎಂದು ನಂಬಿ ಹರಿಕೆ ಹೊತ್ತ ಗ್ರಾಮಸ್ಥರು ಭಕ್ತಿ ಭಾವದಿಂದ ಶಕ್ತಾನುಸಾರ ಗಂಗಮ್ಮ ದೇವರಿಗೆ ತಂಬಿಟ್ಟು ಹಾರತಿ ಸಮರ್ಪಿಸಿ ಧನ್ಯರಾಗುತ್ತಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



