ಶ್ರೀನಿವಾಸಪುರ:ಶ್ರೀನಿವಾಸಪುರ ತಹಶೀಲ್ದಾರ್ ಅವರ ನೂತನ ಮಹೇಂದ್ರ ಜೀಪಿಗೆ ಖಾಸಗಿ ಬಸ್ ಡಿಕ್ಕಿ ಹೋಡೆದಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ,
ಘಟನೆ ಕೋಲಾರ-ಶ್ರೀನಿವಾಸಪುರ ರಸ್ತೆಯ ಚೆಲ್ದಿಗಾನಹಳ್ಳಿ ಹತ್ತಿರದ ಬೈಪಾಸ್ ಬಳಿ ನಡೆದಿದ್ದು ಮಂಗಳವಾರ ಸಂಜೆ ಕೋಲಾರ ದಿಂದ ಬರುತ್ತಿದ್ದ ಷರಿಫ್ ಬಸ್ ಒವರ್ ಟೇಕ್ ಮಾಡಿಕೊಂಡು ಮುಂದೆ ಸಾಗಿರುತ್ತದೆ ಅದರ ಹಿಂದೆ ಗಾರ್ಮೇಂಟ್ ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಖಾಸಗಿ ಬಸ್ ಮುಂದೆ ನುಗ್ಗಿರುತ್ತದೆ ಅದೆ ಸಮಯಕ್ಕೆ ಶ್ರೀನಿವಾಸಪುರ ತಹಶೀಲ್ದಾರ್ ಸುಧೀಂದ್ರ ರವರು ಇದ್ದ ಮಹಿಂದ್ರಾ ಜೀಪು ಬಂದಿದ್ದು ಬಸ್ಸು ಜಿಪೀಗೆ ಡಿಕ್ಕಿ ಹೊಡೆದು ಅಪಘಾತ ಆಗಿದೆ. ಬಸ್ ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಅಪಘಾತದಿಂದ ಜೀಪು ಟಯರ್ ಬ್ಲಾಸ್ಟ್ ಆಗಿದ್ದು ವಾಹನದ ಮುಂಬಾಗ ಸ್ವಲ್ಪಮಟ್ಟಿಗೆ ಜಕಂ ಆಗಿದೆ. ಜೀಪಿನಲ್ಲಿದ್ದ ತಹಶೀಲ್ದಾರ್ ಸುಧೀಂದ್ರ ಸೇಫ್ ಆಗಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



