ಶ್ರೀನಿವಾಸಪುರ: ಶ್ರೀನಿವಾಸಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಡು ಜಿಂಕೆಯೊಂದು ಮೃತಪಟ್ಟಿದೆ. ಬಾರಿ ಗಾತ್ರದ ಜಿಂಕೆಯೊಂದು ರಸ್ತೆ ದಾಟುವಾಗ ಚಿಂತಾಮಣಿ ಕಡೆ ಹೊರಟಿದ್ದ ಕಾರಿನ ಮೇಲೆ ಬಿದ್ದು ಜಿಂಕೆ ಸ್ಥಳದಲ್ಲಿಯೇ ಮೃತಪಟ್ಟಿದೆ. ತಿರುಪತಿ ದರುಶನ ಮುಗಿಸಿ ಚಿಕ್ಕಬಳ್ಳಾಪುರದ ಕಡೆ ಹೋರಟಿದ್ದ ಕಾರು ಕಲ್ಲೂರು ಅರಣ್ಯ ಇಲಾಖೆ ಸಸ್ಯ ಕ್ಷೇತ್ರದ ಬಳಿ ಹೋಗುತ್ತಿದ್ದಾಗ ವಾಹನದ ಮೇಲೆ ಬಾರಿ ಗಾತ್ರದ ವಸ್ತು ಬಿದ್ದಂತಾಗಿ ಕಾರು ನಿಯಂತ್ರಣ ತಪ್ಪಿದಂತಾಯಿತು ತಕ್ಷಣ ಕಾರು ನಿಲ್ಲಿಸಿ ನೋಡಿದಾಗ ರಸ್ತೆ ಬದಿ ಜಿಂಕೆ ಸತ್ತುಬಿದ್ದಿದೆ ಎಂದು ಕಾರು ಚಾಲಕ ಚಿರಂಜಿವಿ ಹೇಳುತ್ತಾರೆ.
ಕಾರು ಹಾಗು ಜಿಂಕೆ ಶವ ವಶಕ್ಕೆ ಪಡೆದ ಅರಣ್ಯ ಇಲಾಖೆ
ಸಾರ್ವಜನಿಕರು ಅಪಘಾತ ಸುದ್ಧಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದಾಗ ಅರಣ್ಯ ರಕ್ಷಕ ಅನಿಲ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೆಲಧಿಕಾರಿಗಳ ಸೂಚನೆಯಂತೆ ಕಾರನ್ನು ವಶಕ್ಕೆ ಪಡೆದು,ಜಿಂಕೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ತಗೆದುಕೊಂಡು ಹೋದರು.ಅರಣ್ಯ ಅಧಿಕಾರಿಗಳು ಹೇಳುವಂತೆ ಕಲ್ಲೂರು ಅರಣ್ಯದಲ್ಲಿ ಜಿಂಕೆಗಳು ದೊಡ್ಡ ಸಂಖ್ಯೆಯಲ್ಲಿದ್ದು ಮಳೆ ಹಿನ್ನಲೆಯಲ್ಲಿ ರಸ್ತೆ ದಾಟಲು ಅರಣ್ಯದಿಂದ ಹೊರಗೆ ಬಂದಿರಬಹುದು ಎಂದು ಶಂಕಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



