ಶ್ರೀನಿವಾಸಪುರ: ಶ್ರೀನಿವಾಸಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಡು ಜಿಂಕೆಯೊಂದು ಮೃತಪಟ್ಟಿದೆ. ಬಾರಿ ಗಾತ್ರದ ಜಿಂಕೆಯೊಂದು ರಸ್ತೆ ದಾಟುವಾಗ ಚಿಂತಾಮಣಿ ಕಡೆ ಹೊರಟಿದ್ದ ಕಾರಿನ ಮೇಲೆ ಬಿದ್ದು ಜಿಂಕೆ ಸ್ಥಳದಲ್ಲಿಯೇ ಮೃತಪಟ್ಟಿದೆ. ತಿರುಪತಿ ದರುಶನ ಮುಗಿಸಿ ಚಿಕ್ಕಬಳ್ಳಾಪುರದ ಕಡೆ ಹೋರಟಿದ್ದ ಕಾರು ಕಲ್ಲೂರು ಅರಣ್ಯ ಇಲಾಖೆ ಸಸ್ಯ ಕ್ಷೇತ್ರದ ಬಳಿ ಹೋಗುತ್ತಿದ್ದಾಗ ವಾಹನದ ಮೇಲೆ ಬಾರಿ ಗಾತ್ರದ ವಸ್ತು ಬಿದ್ದಂತಾಗಿ ಕಾರು ನಿಯಂತ್ರಣ ತಪ್ಪಿದಂತಾಯಿತು ತಕ್ಷಣ ಕಾರು ನಿಲ್ಲಿಸಿ ನೋಡಿದಾಗ ರಸ್ತೆ ಬದಿ ಜಿಂಕೆ ಸತ್ತುಬಿದ್ದಿದೆ ಎಂದು ಕಾರು ಚಾಲಕ ಚಿರಂಜಿವಿ ಹೇಳುತ್ತಾರೆ.
ಕಾರು ಹಾಗು ಜಿಂಕೆ ಶವ ವಶಕ್ಕೆ ಪಡೆದ ಅರಣ್ಯ ಇಲಾಖೆ
ಸಾರ್ವಜನಿಕರು ಅಪಘಾತ ಸುದ್ಧಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದಾಗ ಅರಣ್ಯ ರಕ್ಷಕ ಅನಿಲ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೆಲಧಿಕಾರಿಗಳ ಸೂಚನೆಯಂತೆ ಕಾರನ್ನು ವಶಕ್ಕೆ ಪಡೆದು,ಜಿಂಕೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ತಗೆದುಕೊಂಡು ಹೋದರು.ಅರಣ್ಯ ಅಧಿಕಾರಿಗಳು ಹೇಳುವಂತೆ ಕಲ್ಲೂರು ಅರಣ್ಯದಲ್ಲಿ ಜಿಂಕೆಗಳು ದೊಡ್ಡ ಸಂಖ್ಯೆಯಲ್ಲಿದ್ದು ಮಳೆ ಹಿನ್ನಲೆಯಲ್ಲಿ ರಸ್ತೆ ದಾಟಲು ಅರಣ್ಯದಿಂದ ಹೊರಗೆ ಬಂದಿರಬಹುದು ಎಂದು ಶಂಕಿಸಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



