ಶ್ರೀನಿವಾಸಪುರ: ಶ್ರೀನಿವಾಸಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಡು ಜಿಂಕೆಯೊಂದು ಮೃತಪಟ್ಟಿದೆ. ಬಾರಿ ಗಾತ್ರದ ಜಿಂಕೆಯೊಂದು ರಸ್ತೆ ದಾಟುವಾಗ ಚಿಂತಾಮಣಿ ಕಡೆ ಹೊರಟಿದ್ದ ಕಾರಿನ ಮೇಲೆ ಬಿದ್ದು ಜಿಂಕೆ ಸ್ಥಳದಲ್ಲಿಯೇ ಮೃತಪಟ್ಟಿದೆ. ತಿರುಪತಿ ದರುಶನ ಮುಗಿಸಿ ಚಿಕ್ಕಬಳ್ಳಾಪುರದ ಕಡೆ ಹೋರಟಿದ್ದ ಕಾರು ಕಲ್ಲೂರು ಅರಣ್ಯ ಇಲಾಖೆ ಸಸ್ಯ ಕ್ಷೇತ್ರದ ಬಳಿ ಹೋಗುತ್ತಿದ್ದಾಗ ವಾಹನದ ಮೇಲೆ ಬಾರಿ ಗಾತ್ರದ ವಸ್ತು ಬಿದ್ದಂತಾಗಿ ಕಾರು ನಿಯಂತ್ರಣ ತಪ್ಪಿದಂತಾಯಿತು ತಕ್ಷಣ ಕಾರು ನಿಲ್ಲಿಸಿ ನೋಡಿದಾಗ ರಸ್ತೆ ಬದಿ ಜಿಂಕೆ ಸತ್ತುಬಿದ್ದಿದೆ ಎಂದು ಕಾರು ಚಾಲಕ ಚಿರಂಜಿವಿ ಹೇಳುತ್ತಾರೆ.
ಕಾರು ಹಾಗು ಜಿಂಕೆ ಶವ ವಶಕ್ಕೆ ಪಡೆದ ಅರಣ್ಯ ಇಲಾಖೆ
ಸಾರ್ವಜನಿಕರು ಅಪಘಾತ ಸುದ್ಧಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದಾಗ ಅರಣ್ಯ ರಕ್ಷಕ ಅನಿಲ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೆಲಧಿಕಾರಿಗಳ ಸೂಚನೆಯಂತೆ ಕಾರನ್ನು ವಶಕ್ಕೆ ಪಡೆದು,ಜಿಂಕೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ತಗೆದುಕೊಂಡು ಹೋದರು.ಅರಣ್ಯ ಅಧಿಕಾರಿಗಳು ಹೇಳುವಂತೆ ಕಲ್ಲೂರು ಅರಣ್ಯದಲ್ಲಿ ಜಿಂಕೆಗಳು ದೊಡ್ಡ ಸಂಖ್ಯೆಯಲ್ಲಿದ್ದು ಮಳೆ ಹಿನ್ನಲೆಯಲ್ಲಿ ರಸ್ತೆ ದಾಟಲು ಅರಣ್ಯದಿಂದ ಹೊರಗೆ ಬಂದಿರಬಹುದು ಎಂದು ಶಂಕಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



